ಪಿಎಂಇಂಡಿಯಾ
ದೆಹಲಿಯಲ್ಲಿ ಸಂಭವಿಸಿದ ಭೀಕರ ಅಗ್ನಿ ಅವಘಡದಲ್ಲಿ ಉಂಟಾದ ಜೀವಹಾನಿಯ ಬಗ್ಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
ದೆಹಲಿಯಲ್ಲಿ ಸಂಭವಿಸಿದ ಅಗ್ನಿ ಅವಘಡದಲ್ಲಿ ಮೃತಪಟ್ಟವರ ಕುಟುಂಬಕ್ಕೆ ತಲಾ ರೂ. 2 ಲಕ್ಷಗಳನ್ನು ಮತ್ತು ಘಟನೆಯಲ್ಲಿ ಗಾಯಗೊಂಡವರಿಗೆ ರೂ. 50,000ಗಳ ಪರಿಹಾರವನ್ನು ಪ್ರಧಾನ ಮಂತ್ರಿಗಳ ರಾಷ್ಟ್ರೀಯ ಪರಿಹಾರ ನಿಧಿಯಿಂದ (ಪಿ.ಎಂ.ಎನ್.ಆರ್.ಎಫ್.) ನೀಡುವುದಾಗಿ ಪ್ರಧಾನಮಂತ್ರಿಯವರು ಘೋಷಿಸಿದ್ದಾರೆ.
ಪ್ರಧಾನಮಂತ್ರಿಯವರು ಈ ರೀತಿ ಸಂದೇಶ ಟ್ವೀಟ್ ಮಾಡಿದ್ದಾರೆ;
“ದೆಹಲಿಯ ಬೆಂಕಿ ದುರಂತದಲ್ಲಿ ಆಗಿರುವ ಪ್ರಾಣಹಾನಿಯಿಂದ ತುಂಬಾ ದುಃಖವಾಗಿದೆ. ನನ್ನ ಆಲೋಚನೆಗಳು ದುಃಖಿತ ಕುಟುಂಬಗಳೊಂದಿಗೆ ಇವೆ. ಗಾಯಗೊಂಡವರು ಶೀಘ್ರವಾಗಿ ಚೇತರಿಸಿಕೊಳ್ಳಬೇಕೆಂದು ನಾನು ಬಯಸುತ್ತೇನೆ.”
ಪ್ರಧಾನ ಮಂತ್ರಿ ಕಾರ್ಯಾಲಯವು ಈ ರೀತಿ ಸಂದೇಶ ಟ್ವೀಟ್ ಮಾಡಿದೆ;
“ದೆಹಲಿಯ ಅಗ್ನಿ ಅವಘಡದಲ್ಲಿ ಪ್ರಾಣ ಕಳೆದುಕೊಂಡವರ ಕುಟುಂಬಕ್ಕೆ ಪ್ರಧಾನ ಮಂತ್ರಿಗಳ ರಾಷ್ಟ್ರೀಯ ಪರಿಹಾರ ನಿಧಿಯಿಂದ (ಪಿ.ಎಂ.ಎನ್.ಆರ್.ಎಫ್.) ತಲಾ ರೂ. 2 ಲಕ್ಷಗಳನ್ನು ಹಾಗೂ ಗಾಯಾಳುಗಳಿಗೆ ರೂ. 50,000 ನೀಡಲಾಗುವುದು : ಪ್ರಧಾನ ಮಂತ್ರಿ @narendramodi”
****
Extremely saddened by the loss of lives due to a tragic fire in Delhi. My thoughts are with the bereaved families. I wish the injured a speedy recovery.
— Narendra Modi (@narendramodi) May 13, 2022
Rs. 2 lakh each from PMNRF would be given to the next of kin of those who lost their lives in the fire in Delhi. The injured would be given Rs. 50,000 : PM @narendramodi
— PMO India (@PMOIndia) May 13, 2022