ಪಿಎಂಇಂಡಿಯಾ
ಇಂದು ನೇಪಾಳದ ಪ್ರಧಾನಮಂತ್ರಿಯಾಗಿ ಪ್ರತಿಜ್ಞೆ ಸ್ವೀಕರಿಸಿದ ಗೌರವಾನ್ವಿತ ಶ್ರೀ ಪುಷ್ಪ ಕಮಲ್ ದಹಾಲ್ ‘ಪ್ರಚಂಡ’ ಅವರ ಜೊತೆಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ದೂರವಾಣಿ ಸಂಭಾಷಣೆ ನಡೆಸಿದರು.
ಉಭಯ ನಾಯಕರು ಭಾರತ-ನೇಪಾಳ ದ್ವಿಪಕ್ಷೀಯ ಸಹಕಾರದ ವಿವಿಧ ಅಂಶಗಳನ್ನು ಪರಿಶೀಲಿಸಿದರು. ದ್ವಿಪಕ್ಷೀಯ ಪಾಲುದಾರಿಕೆಯನ್ನು ಮುಂದುವರಿಸಲು ಮತ್ತು ಆಳವಾದ ಬಾಂಧವ್ಯವನ್ನು ಇನ್ನಷ್ಟು ಬಲಪಡಿಸಲು ಹಾಗೂ ಪ್ರಧಾನಮಂತ್ರಿ ಶ್ರೀ ಪ್ರಚಂದ್ ಅವರ ಇತ್ತೀಚೆಗೆ 31 ಮೇ ರಿಂದ ೦3 ಜೂನ್ 2023 ರವರೆಗೆ ಭಾರತಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಎರಡು ದೇಶಗಳ ನಡುವಿನ ಸ್ನೇಹಕ್ಕಾಗಿ ನಡೆದ ಚರ್ಚೆಗಳನ್ನು ಪರಿಶೀಲಿಸಿದರು.
ನೇಪಾಳವು ನಿಕಟ ಮತ್ತು ಸ್ನೇಹಪರ ನೆರೆಹೊರೆ ದೇಶವಾಗಿದೆ, ಹಾಗೂ ಭಾರತದ ‘ನೆರೆಹೊರೆ ಮೊದಲು’ ನೀತಿಯಲ್ಲಿ ಪ್ರಮುಖ ಪಾಲುದಾರ ರಾಷ್ಟ್ರವಾಗಿದೆ.
ಈ ದೂರವಾಣಿ ಸಂಭಾಷಣೆಯು ಉಭಯ ದೇಶಗಳ ನಡುವಿನ ಉನ್ನತ ಮಟ್ಟದ ವಿನಿಮಯದ ಸಂಪ್ರದಾಯದ ಮುಂದುವರಿದ ಭಾಗವಾಗಿದೆ.
*******
Pleased to have spoken with Prime Minister @cmprachanda of Nepal today. Building upon our fruitful talks in New Delhi on 1 June 2023, we are in agreement about the need to expedite the implementation of key decisions from our discussions. This will further strengthen the…
— Narendra Modi (@narendramodi) August 5, 2023