Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಕರ್ನಾಟಕದ ಬೆಂಗಳೂರಿನಲ್ಲಿ ಗೋಡೆ ಕುಸಿದು ಸಂಭವಿಸಿದ ಜೀವಹಾನಿಗೆ ಪ್ರಧಾನಮಂತ್ರಿ ಸಂತಾಪ


ಕರ್ನಾಟಕದ ಬೆಂಗಳೂರಿನಲ್ಲಿ ಗೋಡೆ ಕುಸಿದು ಸಂಭವಿಸಿದ ದುರದೃಷ್ಟಕರ ಘಟನೆಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ತೀವ್ರ ಶೋಕ ವ್ಯಕ್ತಪಡಿಸಿದ್ದಾರೆ.

ಪ್ರಧಾನಮಂತ್ರಿಗಳು ಮೃತರ ಕುಟುಂಬಗಳಿಗೆ ತಮ್ಮ ಸಂತಾಪ ಸೂಚಿಸಿ, ಗಾಯಾಳುಗಳು ಶೀಘ್ರ ಗುಣಮುಖರಾಗಲಿ ಎಂದು ಹಾರೈಸಿದ್ದಾರೆ. 

ಮೃತರ ವಾರಸುದಾರರಿಗೆ ಪ್ರಧಾನಮಂತ್ರಿ ರಾಷ್ಟ್ರೀಯ ಪರಿಹಾರ ನಿಧಿ (ಪಿ ಎಂ ಎನ್‌ ಆರ್‌ ಎಫ್) ನಿಂದ ತಲಾ 2 ಲಕ್ಷ ರೂಪಾಯಿ ಪರಿಹಾರ ಮತ್ತು ಗಾಯಗೊಂಡವರಿಗೆ ತಲಾ 50,000 ರೂಪಾಯಿ ಪರಿಹಾರ ನೀಡುವುದಾಗಿ ಶ್ರೀ ಮೋದಿ ಅವರು ಪ್ರಕಟಿಸಿದ್ದಾರೆ.

ಪ್ರಧಾನಮಂತ್ರಿಗಳು ಎಕ್ಸ್ ನಲ್ಲಿ ಹೀಗೆ ಪೋಸ್ಟ್ ಮಾಡಿದ್ದಾರೆ: 

“ಕರ್ನಾಟಕದ ಬೆಂಗಳೂರಿನಲ್ಲಿ ಗೋಡೆ ಕುಸಿದು ಸಂಭವಿಸಿದ ದುರ್ಘಟನೆ ದುರದೃಷ್ಟಕರ. ಮೃತರ ಕುಟುಂಬಗಳಿಗೆ ನನ್ನ ಸಂತಾಪಗಳು. ಗಾಯಾಳುಗಳು ಶೀಘ್ರ ಚೇತರಿಸಿಕೊಳ್ಳಲಿ.”

“ಮೃತರ ವಾರಾಸುದಾರರಿಗೆ ಪಿ ಎಂ ಎನ್ ಆರ್ ಎಫ್ ನಿಂದ ತಲಾ 2 ಲಕ್ಷ ರೂ. ಹಾಗೂ ಗಾಯಾಳುಗಳಿಗೆ ತಲಾ 50,000 ರೂ. ಪರಿಹಾರ ನೀಡಲಾಗುವುದು: ಪ್ರಧಾನಮಂತ್ರಿ”

 

*****