ಪಿಎಂಇಂಡಿಯಾ
ಅವರು ವಾರಣಾಸಿಯಲ್ಲಿ ಅಂತಾರಾಷ್ಟ್ರೀಯ ಅಕ್ಕಿ ಸಂಶೋಧನಾ ಸಂಸ್ಥೆಯ ಕ್ಯಾಂಪಸ್ಸನ್ನು ಲೋಕಾರ್ಪಣೆಗೈದರು . ಅವರು ಸಂಸ್ಥೆಯ ವಿವಿಧ ಪ್ರಯೋಗಾಲಯಗಳಿಗೆ ಭೇಟಿ ನೀಡಿದರು.
ದೀನ ದಯಾಳ ಹಸ್ತಕಲಾ ಸಂಕುಲದಲ್ಲಿ ಪ್ರಧಾನ ಮಂತ್ರಿ ಅವರು “ ಒಂದು ಜಿಲ್ಲೆ, ಒಂದು ಉತ್ಪನ್ನ” (ಒ.ಡಿ.ಒ.ಪಿ.) ವಸ್ತು ಪ್ರದರ್ಶನಕ್ಕೆ ಭೇಟಿ ನೀಡಿದರು.
ಅವರು ಸಮಗ್ರ ಪೆನ್ಷನ್ ಆಡಳಿತ ಯೋಜನೆಯನ್ನು ಕಾರ್ಯಾರಂಭಗೊಳಿಸಿದರು.ವಾರಣಾಸಿಯಲ್ಲಿ ವಿವಿಧ ಶಿಲಾನ್ಯಾಸ ಮತ್ತು ವಿವಿಧ ಯೋಜನೆಗಳ ಕಾರ್ಯಾರಂಭದ ನಾಮ ಫಲಕಗಳನ್ನು ಅನಾವರಣಗೊಳಿಸಿದರು.
ಇಂದು ಕಾರ್ಯಾರಂಭಗೊಳಿಸಿದ ವಿವಿಧ ಯೋಜನೆಗಳನ್ನು ಪ್ರಸ್ತಾಪಿಸಿದ ಅವರು ಇವೆಲ್ಲವೂ ಏಕ ಉದ್ದೇಶವನ್ನು ಹೊಂದಿವೆ: ಜೀವಿಸಲು ಉತ್ತಮ ಅವಕಾಶವನ್ನು ಒದಗಿಸುವುದು ಮತ್ತು ವ್ಯಾಪಾರೋದ್ಯಮಕ್ಕೆ ಅನುಕೂಲಕರ ವಾತಾವರಣವನ್ನು ನಿರ್ಮಿಸುವುದು ಇದರ ಹಿಂದಿನ ಉದ್ದೇಶ ಎಂದರು. ಉತ್ತರ ಪ್ರದೇಶ ಸರಕಾರದ “ ಒಂದು ಜಿಲ್ಲೆ, ಒಂದು ಉತ್ಪನ್ನ “ ಯೋಜನೆ “ಮೇಕ್ ಇನ್ ಇಂಡಿಯಾ”ದ ವಿಸ್ತರಣೆ ಎಂದವರು ಬಣ್ಣಿಸಿದರು.
ಉತ್ತರ ಪ್ರದೇಶ ರಾಜ್ಯದಲ್ಲಿ ಸಣ್ಣ ಮತ್ತು ಮಧ್ಯಮ ವಲಯದ ಉದ್ಯಮಗಳು ಪರಂಪರೆಯ ಅಂಗಗಳು ಎಂದು ಹೇಳಿದ ಪ್ರಧಾನ ಮಂತ್ರಿಗಳು , ಈ ನಿಟ್ಟಿನಲ್ಲಿ ಬದೋಹಿಯ ರತ್ನಗಂಬಳಿ , ಮೀರತ್ ನ ಕ್ರೀಡಾ ಸಾಮಗ್ರಿಗಳ ಕೈಗಾರಿಕೆ, ವಾರಣಾಸಿಯ ರೇಷ್ಮೆ ಕೈಗಾರಿಕೆಗಳು ಮತ್ತು ಇತರ ಹಲವನ್ನು ಉಲ್ಲೇಖಿಸಿದರು. ವಾರಣಾಸಿ ಮತ್ತು ಪೂರ್ವಾಂಚಲವನ್ನು ಕರಕುಶಲ ವಸ್ತುಗಳು ಮತ್ತು ಕಲೆಯ ತಾಣವೆಂದು ವಿವರಿಸಿದ ಅವರು ವಾರಣಾಸಿ ಮತ್ತು ಹತ್ತಿರದ ವಲಯದ 10 ಉತ್ಪನ್ನಗಳು ಜಿಯಾಗ್ರಾಫಿಕಲ್ ಇಂಡಿಕೇಶನ್ ಟ್ಯಾಗ್ (ಜಿ.ಐ.ಎ.) ಪಡೆದುಕೊಂಡಿವೆ ಎಂದರು. ಒಂದು ಜಿಲ್ಲೆ ಒಂದು ಉತ್ಪನ್ನ ಯೋಜನೆ ಉತ್ತಮ ಯಂತ್ರೋಪಕರಣಗಳು, ತರಬೇತಿ ಮತ್ತು ಮಾರುಕಟ್ಟೆ ಬೆಂಬಲದ ಖಾತ್ರಿಪಡಿಸುವಿಕೆ ಮೂಲಕ ಈ ಕಲೆಯ ಅಭಿವ್ಯಕ್ತಿಗಳನ್ನು ಲಾಭದಾಯಕ ವ್ಯಾಪಾರವಾಗಿಸಲಿದೆ ಎಂದು ಹೇಳಿದ ಪ್ರಧಾನ ಮಂತ್ರಿಗಳು ಈ ಕಾರ್ಯಕ್ರಮದಲ್ಲಿ 2000 ಕೋ.ರೂ.ಗಳಷ್ಟು ಸಾಲ ವಿತರಿಸಲಾಗುವುದೆಂದು ತಮಗೆ ತಿಳಿಸಲಾಗಿದೆ ಎಂದರು.
ಈ ಯೋಜನೆಯಲ್ಲಿ ಉತ್ಪನ್ನಗಳ ತಯಾರಕರ ಸಮಸ್ಯೆಗಳಿಗೆ ಪೂರ್ಣ ಪ್ರಮಾಣದ ಪರಿಹಾರ ಒದಗಿಸಲು ಆದ್ಯತೆ ನೀಡಲಾಗಿದೆ ಎಂದು ಹೇಳಿದ ಅವರು ದೀನ ದಯಾಳ ಹಸ್ತಕಲಾ ಸಂಕುಲ ಈಗ ತನ್ನ ಪರಮೋಚ್ಚ ಉದ್ದೇಶವನ್ನು ಈಡೇರಿಸುತ್ತಿದೆ ಎಂದರು.
ಕೇಂದ್ರ ಸರಕಾರವು ಸಾಮಾನ್ಯ ಜನರ ಜೀವನವನ್ನು ಉತ್ತಮಪಡಿಸುವ ನಿಟ್ಟಿನಲ್ಲಿ ಕೆಲಸ ಮಾಡಿದೆ ಮತ್ತು ವ್ಯಾಪಾರೋದ್ಯಮಕ್ಕೆ ಉತ್ತಮ ಅವಕಾಶಗಳನ್ನು ಉತ್ತೇಜಿಸುತ್ತಿದೆ ಎಂದೂ ಪ್ರಧಾನ ಮಂತ್ರಿ ಹೇಳಿದರು.
ಎಸ್.ಎ.ಎಂ.ಪಿ.ಎ.ಎನ್.ಎನ್. ಎಂಬ ಪೆನ್ಷನ್ ಪ್ರಾಧಿಕಾರ ಮತ್ತು ಆಡಳಿತ ವ್ಯವಸ್ಥೆಯನ್ನು ಇಂದು ಕಾರ್ಯಾರಂಭಗೊಳಿಸಲಾಗಿದೆ, ಇದು ಟೆಲಿಕಾಂ ಇಲಾಖೆಯ ನಿವೃತ್ತಿ ವೇತನದಾರರಿಗೆ ಅನುಕೂಲತೆಗಳನ್ನು ಕಲ್ಪಿಸಲಿದೆ ಮತ್ತು ಸಕಾಲದಲ್ಲಿ ನಿವೃತ್ತಿ ವೇತನ ವಿತರಣೆಗೆ ಸಹಾಯ ಮಾಡಲಿದೆ ಎಂದೂ ಪ್ರಧಾನ ಮಂತ್ರಿ ಅವರು ಹೇಳಿದರು.
ಜೀವಿಸುವ ಅವಕಾಶಗಳನ್ನು ಉತ್ತಮಪಡಿಸಲು ಮತ್ತು ನಾಗರಿಕ ಕೇಂದ್ರಿತ ಸೇವೆಗಳು ಸುಲಭದಲ್ಲಿ ಲಭ್ಯವಾಗುವಂತೆ ಮಾಡಲು ಕೇಂದ್ರ ಸರಕಾರವು ತಂತ್ರಜ್ಞಾನವನ್ನು ಬಳಸುತ್ತಿದೆ ಎಂದು ನುಡಿದ ಪ್ರಧಾನ ಮಂತ್ರಿಗಳು ಅಂಚೆ ಕಚೇರಿಗಳ ಮೂಲಕ ಬ್ಯಾಂಕಿಂಗ್ ಸೇವೆಯನ್ನು ವಿಸ್ತರಿಸಲು ಇಂಡಿಯಾ ಅಂಚೆ ಪಾವತಿ ಬ್ಯಾಂಕುಗಳನ್ನು ಬಳಸಲಾಗುತ್ತಿದೆ ಎಂದರು. ಗ್ರಾಮೀಣ ಪ್ರದೇಶಗಳಲ್ಲಿ 3 ಲಕ್ಷಕ್ಕೂ ಅಧಿಕ ಸಾಮಾನ್ಯ ಸೇವಾ ಕೇಂದ್ರಗಳು ವಿವಿಧ ಸೇವೆಗಳನ್ನು ಡಿಜಿಟಲ್ ವ್ಯವಸ್ಥೆ ಮೂಲಕ ಜನತೆಗೆ ಒದಗಿಸುತ್ತಿವೆ ಎಂಬುದನ್ನು ಪ್ರಸ್ತಾಪಿಸಿದ ಅವರು ದೇಶದಲ್ಲಿ ಅಂತರ್ಜಾಲ ಸಂಪರ್ಕಗಳಲ್ಲಿ ಭಾರೀ ಏರಿಕೆಯಾಗಿರುವುದರ ಬಗ್ಗೆಯೂ ಮಾತನಾಡಿದರು. ದೇಶದಲ್ಲಿ ಒಂದು ಲಕ್ಷಕ್ಕೂ ಅಧಿಕ ಪಂಚಾಯತುಗಳು ಈಗ ಬ್ರಾಡ್ ಬ್ಯಾಂಡಿನೊಂದಿಗೆ ಸಂಪರ್ಕಿಸಲ್ಪಟ್ಟಿವೆ ಎಂದವರು ಹೇಳಿದರು. ಡಿಜಿಟಲ್ ಇಂಡಿಯಾ ಜನರಿಗೆ ಅನುಕೂಲತೆಗಳನ್ನು ಒದಗಿಸುತ್ತಿರುವುದು ಮಾತ್ರವಲ್ಲದೆ ಸರಕಾರೀ ಕೆಲಸದಲ್ಲಿ ಪಾರದರ್ಶಕತೆಯನ್ನು ತರುತ್ತಿದೆ ಮತ್ತು ಭ್ರಷ್ಟಾಚಾರವನ್ನು ತಡೆಯುತ್ತಿದೆ ಎಂದರು. ಈ ಹಿನ್ನೆಲೆಯಲ್ಲಿ ಅವರು ಸರಕಾರದ ಇ-ಮಾರ್ಕೆಟ್ ಅಥವಾ ಜಿ.ಇ.ಎಂ.ನ್ನು ಉಲ್ಲೇಖಿಸಿದರು. ಎಂ.ಎಸ್.ಎಂ.ಇ.ಗಳಿಗೆ ಜಿ.ಇ.ಎಂ. ಅತ್ಯುಪಯುಕ್ತ ಎಂದವರು ಹೇಳಿದರು.
ಎಂ.ಎಸ್.ಎಂ.ಇ.ಗಳನ್ನು ಸಶಕ್ತೀಕರಣಗೊಳಿಸುವುದಕ್ಕೆ ಕೇಂದ್ರ ಸರಕಾರ ಕಟಿಬದ್ಧವಾಗಿದೆ ಎಂದೂ ಪ್ರಧಾನ ಮಂತ್ರಿ ಅವರು ನುಡಿದರು. ಎಂ.ಎಸ್.ಎಂ.ಇ.ಗಳಿಗೆ ಸುಲಭದಲ್ಲಿ ಸಾಲ ಲಭ್ಯವಾಗುವ ಮೂಲಕ , ವ್ಯಾಪಾರೋದ್ಯಮಕ್ಕೆ ಅನುಕೂಲಕರ ವಾತಾವರಣವನ್ನು ಖಾತ್ರಿಪಡಿಸಲಾಗಿದೆ ಎಂದರು.
ಪೂರ್ವ ಭಾರತದಲ್ಲಿ ಎಲ್.ಎನ್.ಜಿ. ಮೂಲಕ ಆಧುನಿಕ ಸೌಕರ್ಯಗಳನ್ನು ಕಲ್ಪಿಸಿ , ಕೈಗಾರಿಕೆಗಳಿಗೆ ಉತ್ತೇಜನ ನೀಡುವ ನಿಟ್ಟಿನಲ್ಲಿ ದೊಡ್ಡ ಪ್ರಮಾಣದ ಪ್ರಯತ್ನಗಳು ನಡೆಯುತ್ತಿವೆ. ಇದರ ಒಂದು ಲಾಭ ಎಂದರೆ ಅಡುಗೆ ಅನಿಲ. ಅದೀಗ ವಾರಣಾಸಿಯ ಸಾವಿರಾರು ಮನೆಗಳಿಗೆ ದೊರೆಯಲಾರಂಭಿಸಿದೆ ಎಂದು ಪ್ರಧಾನ ಮಂತ್ರಿ ಅವರು ನುಡಿದರು.
ವಾರಣಾಸಿಯ ಅಕ್ಕಿ ಸಂಶೋಧನಾ ಸಂಸ್ಥೆಯ ಕ್ಯಾಂಪಸ್ ಕುರಿತಂತೆ ಪ್ರಸ್ತಾಪಿಸಿದ ಪ್ರಧಾನ ಮಂತ್ರಿಗಳು ಈ ಕೇಂದ್ರ ತಂತ್ರಜ್ಞಾನ ಬಳಸಿ ಕೃಷಿಯನ್ನು ಹೆಚ್ಚು ಲಾಭದಾಯಕ ಮಾಡುವ ನಮ್ಮ ಪ್ರಯತ್ನದ ಫಲ ಎಂದರು.
ಕಾಶಿಯ ಪರಿವರ್ತನೆ ಈಗ ಕಣ್ಣಿಗೆ ಕಾಣಿಸುತ್ತಿದೆ , ಇಂದು ಆರಂಭಗೊಳಿಸಲಾದ ಅಭಿವೃದ್ಧಿ ಯೋಜನೆಗಳು ಈ ನಿಟ್ಟಿನಲ್ಲಿ ಇನ್ನಷ್ಟು ನೆರವು ನೀಡಲಿವೆ ಎಂದರು. ಗಂಗಾ ನದಿಯನ್ನು ಸ್ವಚ್ಚಗೊಳಿಸಲು ಕೇಂದ್ರ ಸರಕಾರ ಬದ್ಧವಾಗಿರುವುದನ್ನು ಪ್ರಧಾನ ಮಂತ್ರಿ ಪುನರುಚ್ಚರಿಸಿದರು. ಸಾರ್ವಜನಿಕರ ಸಹಕಾರದಿಂದ ಈ ಕ್ರಮ ತನ್ನ ಗುರಿಯತ್ತ ಸಾಗುತ್ತಿದೆ ಎಂದವರು ಹೇಳಿದರು.
ತಿಂಗಳಾಂತ್ಯದಲ್ಲಿ ವಾರಣಾಸಿಯಲ್ಲಿ ಜರುಗಲಿರುವ ಪ್ರವಾಸಿ ಭಾರತೀಯ ದಿವಸ್ ಯಶಸ್ಸು ಗಳಿಸುತ್ತದೆ ಎಂಬ ಬಗ್ಗೆ ಪ್ರಧಾನ ಮಂತ್ರಿ ಅವರು ವಿಶ್ವಾಸ ವ್ಯಕ್ತಪಡಿಸಿದರು.
It is a matter of pride for Kashi that this great city is now home to the International Rice Research Institute South Asia Regional Centre. This Centre harnesses the power of technology and innovation for the benefit of our farmers.
— Narendra Modi (@narendramodi) December 29, 2018
Glimpses from the inauguration today. pic.twitter.com/7sSZTLrfSH
हर ज़िले में कुछ अलग है, जिसने यहां लोगों को रोज़गार से जोड़ा है।
— PMO India (@PMOIndia) December 29, 2018
इसको विस्तार देने के लिए एक जनपद, एक उत्पाद लाभकारी सिद्ध होने वाली है।
पूर्वांचल तो हस्तशिल्प का हब है।
कलाकारी चाहे कपड़े और कालीन में हो या फिर मिट्टी या धातू के बर्तनों में, कण-कण में कला बसी हुई है: PM
आज जन्म प्रमाण पत्र से लेकर जीवन प्रमाण पत्र तक सरकार की सैकड़ों सेवाओं का बड़ी तेज़ गति से विस्तार हो रहा है।
— PMO India (@PMOIndia) December 29, 2018
पेंशन जैसी व्यवस्थाओं को भी आसान किया जा रहा है।
घर पर जाकर ही दिव्यांगों, वृद्ध जनों को डिजिटल जीवन प्रमाण पत्र जारी करने का काम चल रहा है: PM
आपने अखबारों में पढ़ा होगा कि देश में 50 करोड़ से अधिक इंटरनेट कनेक्शन काम कर रहे हैं,
— PMO India (@PMOIndia) December 29, 2018
शहरों में तो ये बढ़ोतरी हुई ही है, गांवों में भी तेज़ी से इंटरनेट का दायरा बढ़ा है,
डिजिटल इंडिया से सुविधा तो बढ़ ही रही है, साथ ही ये भ्रष्टाचार को कम करने पारदर्शिता का साधन बन रहा है: PM
पूर्वी भारत में आधुनिक सुविधाएं के लिए बेहतर माहौल बनाने का काम चल रहा है
— PMO India (@PMOIndia) December 29, 2018
प्रधानमंत्री ऊर्जा गंगा योजना के तहत गैस पाइपलाइन बिछाई जा रही है
इससे घरों की रसोई से लेकर खाद कारखानों तक के लिए गैस मिलनी शुरु हो चुकी है। वाराणसी में रसोई गैस की योजना से हज़ारों घर जुड़ चुके हैं: PM
काशी में परिवर्तन अब दिखने लगा है, दिव्य काशी का स्वरूप अब और भव्य होता जा रहा है।
— PMO India (@PMOIndia) December 29, 2018
आज भी बनारस के विकास से जुड़ी अनेक परियोजनाओं का शिलान्यास और लोकार्पण किया गया है।
ये सारे कार्य काशी की सुंदरता को और निखारने वाले हैं: PM
गंगा की पवित्रता और अविरलता के प्रति हमारी प्रतिबद्धता है।
— PMO India (@PMOIndia) December 29, 2018
मुझे खुशी है कि हमारे प्रयासों के परिणाम भी दिखने लगे हैं।
आप सभी ने मीडिया में आई उन रिपोर्टों को देखा होगा कि कैसे मछलियां, मगरमच्छ समेत अनेक जीव-जंतु जीवनदायनी मां गंगा में फिर से लौटने लगे हैं: PM
हाल में देश के अनेक वैज्ञानिकों की टीम ने गंगाजल के परीक्षण के बाद एक रिपोर्ट भी दी है। इस रिपोर्ट के मुताबिक मां गंगा में प्रदूषण के स्तर में कमी आई है।
— PMO India (@PMOIndia) December 29, 2018
नमामि गंगे का अभियान जैसे-जैसे आगे बढ़ रहा है, वैसे-वैसे निर्मल और अविरल गंगा का लक्ष्य नज़दीक दिख रहा है: PM
जब पूरी पारदर्शिता के साथ, प्रमाणिकता के साथ, जनभागीदारी से सरकार काम करती है, तब सार्थक परिणाम मिलते हैं।
— PMO India (@PMOIndia) December 29, 2018
वरना आप तो साक्षी रहे हैं कि कभी गंगा एक्शन प्लान से लेकर गंगा बेसिन अथॉरिटी तक ना जाने कैसी-कैसी योजनाएं बनाई गईं।
मां गंगा के नाम पर हज़ारों करोड़ रुपए बहा दिए गए: PM
मां गंगा की निर्मलता के लिए धन की शक्ति ही काफी नहीं है, साफ नीयत भी चाहिए।
— PMO India (@PMOIndia) December 29, 2018
हम पूरी ईमानदारी के साथ, साफ नीयत के साथ गंगा जी को स्वच्छ करने के अभियान में जुटे हुए हैं: PM
काशी में होना ही अपने आप में विशेष अनुभूति देता है। यहां के लोगों से मिले प्यार से मैं अभिभूत हूं।
— Narendra Modi (@narendramodi) December 29, 2018
यहां विकास के कई कार्यों का लोकार्पण किया, जो काशी के लोगों के जीवन को और आसान बनाएगा। pic.twitter.com/ZzEpGT1gRG
‘One District, One Product’ is a commendable initiative of the Uttar Pradesh Government, which will safeguard the well-being of all those associated with MSMEs, especially weaving and handicrafts. pic.twitter.com/16mXZx2pkO
— Narendra Modi (@narendramodi) December 29, 2018
Our Digital India initiative has brought convenience in the lives of crores of Indians and has also helped eliminate corruption. pic.twitter.com/uzKY0ydzkC
— Narendra Modi (@narendramodi) December 29, 2018
बाबा विश्वनाथ की असीम कृपा हम सभी पर रही है।
— Narendra Modi (@narendramodi) December 29, 2018
हमारा प्रयास है कि काशी की आत्मा से छेड़छाड़ किए बिना, हमारा ये चिर-पुरातन शहर नई काया के साथ दुनिया के सामने आए। pic.twitter.com/Tl0ftiV8Np