Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಅಂತರ್ಗತ ಅಭಿವೃದ್ಧಿ ಮತ್ತು ರಾಷ್ಟ್ರ ನಿರ್ಮಾಣದ ಮಹತ್ವವನ್ನು ಬಿಂಬಿಸುವ ಸಂಸ್ಕೃತ ಸುಭಾಷಿತಂ ಹಂಚಿಕೊಂಡ ಪ್ರಧಾನಮಂತ್ರಿ


ಸರ್ವತೋಮುಖ ಅಭಿವೃದ್ಧಿಯು ಪ್ರತಿಯೊಬ್ಬ ನಾಗರಿಕನ ಜೀವನದಲ್ಲಿ ಸಕಾರಾತ್ಮಕ ಪರಿವರ್ತನೆಯನ್ನು ಖಾತ್ರಿಪಡಿಸಿದಾಗ, ಅದು ರಾಷ್ಟ್ರದ ಪ್ರಗತಿಗೆ ಹೊಸ ವೇಗವನ್ನು ನೀಡುತ್ತದೆ ಎಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಹೇಳಿದ್ದಾರೆ. ಈ ಸ್ಪೂರ್ತಿದಾಯಕ ಮನೋಭಾವದಿಂದಲೇ ಭಾರತದ ಸಾಮರ್ಥ್ಯಗಳನ್ನು ಮತ್ತಷ್ಟು ಬಲಪಡಿಸಲು ದೇಶವು ನಿರಂತರವಾಗಿ ಕೆಲಸ ಮಾಡುತ್ತಿದೆ ಎಂದು ಅವರು ಹೇಳಿದರು.

ಪ್ರಧಾನಮಂತ್ರಿ ಅವರು ಸಂಸ್ಕೃತ ಸುಭಾಷಿತಂ ಹಂಚಿಕೊಂಡಿದ್ದಾರೆ-

“कन्यानां सम्प्रदानञ्च कुमाराणाञ्च रक्षणम्।

राष्ट्रस्य सङ्ग्रहे नित्यं विधानमिदमाचरेत्॥”

ಮಹಿಳೆಯರ ಕಲ್ಯಾಣವನ್ನು ಖಾತರಿಪಡಿಸುವುದು, ಯುವ ಪೀಳಿಗೆಯನ್ನು ರಕ್ಷಿಸುವುದು ಮತ್ತು ಪೋಷಿಸುವುದು ಮತ್ತು ರಾಷ್ಟ್ರದ ಏಕತೆ, ಭದ್ರತೆ, ಸಮೃದ್ಧಿ ಮತ್ತು ಸುವ್ಯವಸ್ಥಿತ ಆಡಳಿತಕ್ಕೆ ಅಗತ್ಯವಾದ ವ್ಯವಸ್ಥೆಗಳನ್ನು ನಿರಂತರವಾಗಿ ಮಾಡುವುದು ಪ್ರತಿಯೊಬ್ಬ ಜನಪ್ರತಿನಿಧಿಯ ನಿರಂತರ ಕರ್ತವ್ಯವಾಗಿದೆ ಎಂದು ಸುಭಾಷಿತಂ ತಿಳಿಸುತ್ತದೆ.

ಪ್ರಧಾನಮಂತ್ರಿ ಅವರು ತಮ್ಮ ಎಕ್ಸ್ ಖಾತೆಯಲ್ಲಿ ಹೀಗೆ ಬರೆದಿದ್ದಾರೆ;

“जब चौतरफा विकास के साथ हर देशवासी के जीवन में सकारात्मक परिवर्तन सुनिश्चित होता है, तब राष्ट्र की प्रगति को भी नई गति मिलती है। इसी प्रेरक भावना के साथ हम भारत के सामर्थ्य को निरंतर मजबूती देने में जुटे हुए हैं।

कन्यानां सम्प्रदानञ्च कुमाराणाञ्च रक्षणम्।

राष्ट्रस्य सङ्ग्रहे नित्यं विधानमिदमाचरेत्॥”

 

*****