Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಅಂತಿಮ ಗುರಿಯನ್ನು ಸಾಧಿಸಲು ಶಿಸ್ತು ಮತ್ತು ಮನಸ್ಸಿನ ನಿಯಂತ್ರಣದ ಅಗತ್ಯತೆಗೆ ಒತ್ತು ನೀಡುವ ಸಂಸ್ಕೃತ ಸುಭಾಷಿತವನ್ನು ಹಂಚಿಕೊಂಡ ಪ್ರಧಾನಮಂತ್ರಿ


ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಸಂಸ್ಕೃತ ಸುಭಾಷಿತವೊಂದನ್ನು ಹಂಚಿಕೊಂಡಿದ್ದಾರೆ:

“विज्ञानसारथिर्यस्तु मनःप्रग्रहवान्नरः।

सोऽध्वनः पारमाप्नोति तद्विष्णोः परमं पदम्॥”

ಈ ಮೇಲಿನ ಸುಭಾಷಿತವು ಜೀವನ ಪ್ರಯಾಣವನ್ನು ಶಿಸ್ತುಬದ್ಧ ಮನಸ್ಸಿನಿಂದ – ಜಾಗರೂಕ ಮತ್ತು ವೈಜ್ಞಾನಿಕ ಮನೋಭಾವದ ಸಾರಥಿಯಾಗಿ ಕಾರ್ಯನಿರ್ವಹಿಸುವ ವಿವೇಚನಾಶೀಲ ಬುದ್ಧಿಶಕ್ತಿಯಿಂದ ಮಾರ್ಗದರ್ಶಿಸಲ್ಪಟ್ಟ ವ್ಯಕ್ತಿಯು ಅದರ ಸಂಕೀರ್ಣತೆಗಳನ್ನು ನಿವಾರಿಸಿ, ತನ್ನ ಅಂತಿಮ ಗುರಿಯನ್ನು ಸಾಧಿಸುತ್ತಾನೆ ಎಂದು ಪ್ರತಿಪಾದಿಸುತ್ತದೆ.

ಕಳೆದ 11 ವರ್ಷಗಳಲ್ಲಿ ‘ಡಿಜಿಟಲ್ ಇಂಡಿಯಾ’ ಸಾಧಿಸಿದ ಯಶಸ್ಸು ದೇಶಕ್ಕೆ ಹೊಸ ಜಾಗತಿಕ ಗುರುತನ್ನು ತಂದುಕೊಟ್ಟಿದೆ. ಇದು ನಾವೀನ್ಯತೆ ಮತ್ತು ತಂತ್ರಜ್ಞಾನವನ್ನು ಅಳವಡಿಸಿಕೊಳ್ಳುವ ಮೂಲಕ ರಾಷ್ಟ್ರವನ್ನು ಉನ್ನತ ಎತ್ತರಕ್ಕೆ ಕೊಂಡೊಯ್ಯುವ ಜನರ ಸಂಕಲ್ಪವನ್ನು ಪ್ರತಿಬಿಂಬಿಸುತ್ತದೆ ಎಂದು ಶ್ರೀ ಮೋದಿಯವರು ಹೇಳಿದರು.

ಪ್ರಧಾನಮಂತ್ರಿಯವರು Xನಲ್ಲಿ ಪೋಸ್ಟ್ ಮಾಡಿ:

डिजिटल इंडिया के 11 वर्षों की सफलता से भारतवर्ष को दुनियाभर में एक नई पहचान मिली है। इससे इनोवेशन और टेक्नोलॉजी को अपनाकर देश को नई ऊंचाइयों पर ले जाने की देशवासियों की संकल्पशक्ति का पता चलता है। 

विज्ञानसारथिर्यस्तु मनःप्रग्रहवान्नरः।

सोऽध्वनः पारमाप्नोति तद्विष्णोः परमं पदम्॥

#11YearsOfDigitalIndia

 

*****