ಪಿಎಂಇಂಡಿಯಾ
ಇಂಡೋನೇಷ್ಯಾ ದೇಶಕ್ಕೆ ತಮ್ಮ ಅಧಿಕೃತ ಪ್ರವಾಸದ ಭಾಗವಾಗಿ, ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಇಂದು ಇಂಡೋನೇಷ್ಯಾ ಗಣರಾಜ್ಯದ ಅಧ್ಯಕ್ಷರಾದ ಗೌರವಾನ್ವಿತ ಶ್ರೀ ಪ್ರಬೊವೊ ಸುಬಿಯಾಂತೊ ಅವರು ಇಸ್ತಾನಾ ಮೆರ್ಡೆಕಾ (ಅಧ್ಯಕ್ಷರ ಭವನ) ದಲ್ಲಿ ಆತ್ಮೀಯವಾಗಿ ಬರಮಾಡಿಕೊಂಡು, ಔಪಚಾರಿಕ ಸ್ವಾಗತವನ್ನು ನೀಡಿದರು. ಜನವರಿ 2025 ರಲ್ಲಿ ಭಾರತದ 76ನೇ ಗಣರಾಜ್ಯೋತ್ಸವದ ಮುಖ್ಯ ಅತಿಥಿಯಾಗಿ ಅಧ್ಯಕ್ಷ ಪ್ರಬೊವೊ ಅವರು ಭಾರತಕ್ಕೆ ಭೇಟಿ ನೀಡಿದ ನಂತರ, ಉಭಯ ನಾಯಕರ ನಡುವೆ ನಡೆದ ಮೊದಲ ಭೇಟಿ ಇದಾಗಿದೆ.
ಉಭಯ ನಾಯಕರು ಖಾಸಗಿ ಮತ್ತು ನಿಯೋಗ ಮಟ್ಟದ ಎರಡೂ ಮಾದರಿಗಳಲ್ಲಿ ಅಧಿಕೃತ ಮಾತುಕತೆಗಳನ್ನು ನಡೆಸಿದರು. ವ್ಯಾಪಾರ ಮತ್ತು ಹೂಡಿಕೆ, ರಕ್ಷಣೆ ಮತ್ತು ಭದ್ರತೆ, ಕಡಲ ಸಹಕಾರ, ಡಿಜಿಟಲ್ ಮತ್ತು ಹಣಕಾಸು ತಂತ್ರಜ್ಞಾನ, ಇಂಧನ, ಆರೋಗ್ಯ ಮತ್ತು ಔಷಧಗಳು, ಬಾಹ್ಯಾಕಾಶ, ನಿರ್ಣಾಯಕ ಖನಿಜಗಳು ಮತ್ತು ವಿರಳ ಲೋಹಗಳು, ಸಂಸ್ಕೃತಿ, ಪ್ರವಾಸೋದ್ಯಮ, ಕೃಷಿ ಹಾಗೂ ಉಭಯ ದೇಶಗಳ ಜನರ ನಡುವಿನ ಪರಸ್ಪರ ವಿನಿಮಯ ಸೇರಿದಂತೆ ಒಟ್ಟಾರೆ ‘ಸಮಗ್ರ ಕಾರ್ಯತಂತ್ರದ ಪಾಲುದಾರಿಕೆ’ಯ ಎಲ್ಲಾ ಆಯಾಮಗಳನ್ನು ಅವರು ಪರಾಮರ್ಶಿಸಿದರು. ಭಾರತದ ‘ಓಪನ್ ನೆಟ್ವರ್ಕ್ ಫಾರ್ ಡಿಜಿಟಲ್ ಕಾಮರ್ಸ್’ (ಒಎನ್ ಡಿ ಸಿ) ಆಧಾರಿತ ‘ಇಂಡೋನೇಷ್ಯಾ ಓಪನ್ ನೆಟ್ವರ್ಕ್’ (ಐಒಎನ್) ಆರಂಭವನ್ನು ಉಭಯ ನಾಯಕರು ಸ್ವಾಗತಿಸಿದರು. 2027ರಲ್ಲಿ ಗುರುದೇವ್ ರವೀಂದ್ರನಾಥ ಟಾಗೋರ್ ಅವರು ಇಂಡೋನೇಷ್ಯಾಕ್ಕೆ ಭೇಟಿ ನೀಡಿ ನೂರು ವರ್ಷ ತುಂಬಲಿರುವ ಸಂದರ್ಭದ ನೆನಪಿಗಾಗಿ, ಉಭಯ ದೇಶಗಳು ಜಂಟಿಯಾಗಿ ಈ ವರ್ಷವನ್ನು “ಸಾಂಸ್ಕೃತಿಕ ಮತ್ತು ಶೈಕ್ಷಣಿಕ ರಾಜತಾಂತ್ರಿಕತೆಗಾಗಿ ಟಾಗೋರ್-ದೇವಂತರ ವರ್ಷ” ಎಂದು ಆಚರಿಸಲಿವೆ ಎಂದು ಪ್ರಧಾನಮಂತ್ರಿ ಮೋದಿ ಘೋಷಿಸಿದರು.
ನಾಯಕರು ಪ್ರಾದೇಶಿಕ ಮತ್ತು ಜಾಗತಿಕ ಹಿತಾಸಕ್ತಿಯ ವಿಷಯಗಳ ಕುರಿತೂ ತಮ್ಮ ದೃಷ್ಟಿಕೋನಗಳನ್ನು ವಿನಿಮಯ ಮಾಡಿಕೊಂಡರು. ಆಸಿಯಾನ್-ಭಾರತ ಸಮಗ್ರ ಕಾರ್ಯತಂತ್ರದ ಪಾಲುದಾರಿಕೆಯನ್ನು ಮತ್ತಷ್ಟು ಬಲಪಡಿಸುವ ಬಗ್ಗೆ ಅವರು ಚರ್ಚಿಸಿದರು. ಮುಕ್ತ, ತೆರೆದ ಮತ್ತು ನಿಯಮ ಆಧಾರಿತ ಇಂಡೋ-ಪೆಸಿಫಿಕ್ ಪ್ರದೇಶದ ಕಡೆಗೆ ತಮ್ಮ ಬದ್ಧತೆಯನ್ನು ಅವರು ಪುನರುಚ್ಚರಿಸಿದರು. ಈ ಸಂದರ್ಭದಲ್ಲಿ, ಪ್ರಧಾನಮಂತ್ರಿಯವರು ಭಾರತದ ‘ಮಹಾಸಾಗರ್’ (ಪ್ರದೇಶದಾದ್ಯಂತ ಭದ್ರತೆ ಮತ್ತು ಬೆಳವಣಿಗೆಗಾಗಿ ಪರಸ್ಪರ ಮತ್ತು ಸಮಗ್ರ ಪ್ರಗತಿ) ದೃಷ್ಟಿಕೋನವನ್ನು ಒತ್ತಿಹೇಳಿದರು. 2026ರಲ್ಲಿ ಭಾರತವು ಪ್ರಸ್ತುತ ವಹಿಸಿಕೊಂಡಿರುವ ಬ್ರಿಕ್ಸ್ ಅಧ್ಯಕ್ಷತೆಗೆ ಇಂಡೋನೇಷ್ಯಾದ ಸಂಪೂರ್ಣ ಬೆಂಬಲವನ್ನು ಅಧ್ಯಕ್ಷ ಪ್ರಬೊವೊ ಅವರು ತಿಳಿಸಿದರು.
ಮಾತುಕತೆಯ ನಂತರ, ನಾಯಕರು ರಕ್ಷಣೆ, ನಿರ್ಣಾಯಕ ಖನಿಜಗಳು ಮತ್ತು ವಿರಳ ಲೋಹಗಳು, ವಿಜ್ಞಾನ ಮತ್ತು ತಂತ್ರಜ್ಞಾನ, ಶಿಕ್ಷಣ, ಚುನಾವಣಾ ಪದ್ಧತಿಗಳು, ದೂರಸಂಪರ್ಕ, ಕೃಷಿ, ಕಡಲ ಭದ್ರತೆ, ಬಾಹ್ಯಾಕಾಶ, ಉಕ್ಕು ಪೂರೈಕೆ ಸರಣಿ, ವಿಪತ್ತು ನಿರ್ವಹಣೆ, ವೈದ್ಯಕೀಯ ಉತ್ಪನ್ನಗಳ ನಿಯಂತ್ರಣ, ಆರೋಗ್ಯ ಕಾರ್ಯಪಡೆಯ ಸಹಯೋಗ ಸೇರಿದಂತೆ ವಿವಿಧ ಕ್ಷೇತ್ರಗಳ ತಿಳುವಳಿಕಾ ಒಪ್ಪಂದಗಳ ವಿನಿಮಯಕ್ಕೆ ಸಾಕ್ಷಿಯಾದರು. ಯೋಗ್ಯಕರ್ತದಲ್ಲಿರುವ ಯುನೆಸ್ಕೋ ವಿಶ್ವ ಪರಂಪರೆಯ ತಾಣವಾದ ಪ್ರಂಬಾನನ್ ದೇವಸ್ಥಾನದ ಸಂಕೀರ್ಣದ ಸಂರಕ್ಷಣೆ ಮತ್ತು ಪುನಃಸ್ಥಾಪನೆಗೆ ಭಾರತದ ಬೆಂಬಲದ ಕುರಿತಾದ ಆಸಕ್ತಿ ಪತ್ರವನ್ನು ಸಹ ವಿನಿಮಯ ಮಾಡಿಕೊಳ್ಳಲಾಯಿತು. ವಿನಿಮಯ ಮಾಡಿಕೊಳ್ಳಲಾದ ಒಪ್ಪಂದಗಳ ಸಂಪೂರ್ಣ ಪಟ್ಟಿಯನ್ನು ಇಲ್ಲಿ ನೋಡಬಹುದು [ಲಿಂಕ್].
ಮಾತುಕತೆಯ ನಂತರ, ಅಧ್ಯಕ್ಷ ಪ್ರಬೊವೊ ಅವರು ಪ್ರಧಾನಮಂತ್ರಿಯವರ ಗೌರವಾರ್ಥವಾಗಿ ಭೋಜನಕೂಟವನ್ನು ಏರ್ಪಡಿಸಿದ್ದರು. ಪ್ರಧಾನಮಂತ್ರಿಯವರು ಅಧ್ಯಕ್ಷ ಪ್ರಬೊವೊ ಅವರ ಉದಾತ್ತ ಆತಿಥ್ಯಕ್ಕಾಗಿ ಧನ್ಯವಾದಗಳನ್ನು ಅರ್ಪಿಸಿದರು ಮತ್ತು ಭಾರತಕ್ಕೆ ಭೇಟಿ ನೀಡುವಂತೆ ಅವರಿಗೆ ಆಹ್ವಾನ ನೀಡಿದರು.
*****
Held productive discussions with President Prabowo Subianto at Istana Merdeka in Jakarta. Over the past few years, India-Indonesia relations have acquired new momentum and greater depth. Today’s talks covered various subjects such as trade, human development, agriculture, food… pic.twitter.com/FvVqXEpDDZ
— Narendra Modi (@narendramodi) July 7, 2026
Looking at the future, we agreed that our nations must work closely in areas such as space, telecommunications, artificial intelligence, Digital Public Infrastructure and other emerging technologies. pic.twitter.com/PWOf3mgtbs
— Narendra Modi (@narendramodi) July 7, 2026
Telah melaksanakan diskusi yang produktif bersama Presiden Prabowo Subianto di Istana Merdeka, Jakarta. Dalam beberapa tahun terakhir, hubungan India-Indonesia telah memperoleh momentum baru dan cakupan yang lebih mendalam. Pembicaraan hari ini mencakup berbagai bidang seperti… pic.twitter.com/w4igar20lk
— Narendra Modi (@narendramodi) July 7, 2026
Melihat ke depan, kami sepakat bahwa kedua bangsa kita harus bekerja sama secara erat di berbagai bidang seperti antariksa, telekomunikasi, kecerdasan buatan, Infrastruktur Publik Digital, serta teknologi digital terbarukan lainnya. pic.twitter.com/r7DXJQxnBw
— Narendra Modi (@narendramodi) July 7, 2026