Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಉತ್ತರ ಪ್ರದೇಶದ ಮಥುರಾದಲ್ಲಿ ದೋಣಿ ಅಪಘಾತಕ್ಕೆ ಪ್ರಧಾನಮಂತ್ರಿ ಸಂತಾಪ


ಉತ್ತರಪ್ರದೇಶದ ಮಥುರಾದಲ್ಲಿ ಸಂಭವಿಸಿದ ದೋಣಿ ದುರಂತದಲ್ಲಿ ಜೀವ ಹಾನಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ತೀವ್ರ ಶೋಕ ವ್ಯಕ್ತಪಡಿಸಿದ್ದಾರೆ.

ಈ ದುರಂತದಲ್ಲಿ ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡ ಕುಟುಂಬಗಳಿಗೆ ಪ್ರಧಾನಮಂತ್ರಿಗಳು ತೀವ್ರ ಸಂತಾಪ ಸೂಚಿಸಿದ್ದಾರೆ. ಅಪಘಾತದಲ್ಲಿ ಗಾಯಗೊಂಡವರು ಶೀಘ್ರ ಗುಣಮುಖರಾಗಲು ಪ್ರಾರ್ಥಿಸುವುದಾಗಿ ಶ್ರೀ ಮೋದಿ ಅವರು ಹೇಳಿದ್ದಾರೆ. ದುರಂತದಿಂದ ಬಾಧಿತರಾದವರಿಗೆ ಸ್ಥಳೀಯ ಆಡಳಿತವು ಸಾಧ್ಯವಿರುವ ಎಲ್ಲ ನೆರವನ್ನು ಸಕ್ರಿಯವಾಗಿ ಒದಗಿಸುತ್ತಿದೆ ಎಂದು ಪ್ರಧಾನಮಂತ್ರಿ ತಿಳಿಸಿದ್ದಾರೆ. 

ಪ್ರಧಾನಮಂತ್ರಿಗಳ ಎಕ್ಸ್ ಪೋಸ್ಟ್ ಹೀಗಿದೆ’

“ಉತ್ತರಪ್ರದೇಶದ ಮಥುರಾದಲ್ಲಿ ದೋಣಿ ಮಗುಚಿ ಸಂಭವಿಸಿದ ದುರಂತದಿಂದ ತೀವ್ರ ನೋವಾಗಿದೆ. ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡವರಿಗೆ ನನ್ನ ಸಂತಾಪಗಳು. ಗಾಯಾಳುಗಳು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ನಾನು ಪ್ರಾರ್ಥಿಸುತ್ತೇನೆ. ಬಾಧಿತರಿಗೆ ಸ್ಥಳೀಯ ಆಡಳಿತವು ನೆರವು ನೀಡುತ್ತಿದೆ.”

 

*****