Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಕತಾರ್ ದೇಶದ ಅಮೀರ್ ಘನತೆವೆತ್ತ ಶೇಖ್ ಹಮದ್ ಬಿನ್ ಖಲೀಫಾ ಅಲ್ ಥಾನಿ ಅವರ ನಿಧನಕ್ಕೆ ಪ್ರಧಾನಮಂತ್ರಿ ಸಂತಾಪ


ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಕತಾರ್ ರಾಷ್ಟ್ರಪಿತ ಅಮೀರ್ ಘನತೆವೆತ್ತ ಶೇಖ್ ಹಮದ್ ಬಿನ್ ಖಲೀಫಾ ಅಲ್ ಥಾನಿ ಅವರ ನಿಧನಕ್ಕೆ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

ಖಲೀಫಾ ಅಲ್ ಅವರು ಕತಾರ್ ಅನ್ನು ಶ್ರೇಷ್ಠ ಮಟ್ಟದ ಅಭಿವೃದ್ಧಿ ಮತ್ತು ಸಮೃದ್ಧಿಯತ್ತ ಮುನ್ನಡೆಸಿದ ದೂರದರ್ಶಿತ್ವದ ನಾಯಕ ಎಂದು ಪ್ರಧಾನಮಂತ್ರಿ ಬಣ್ಣಿಸಿದರು. 2024ರ ಫೆಬ್ರವರಿಯಲ್ಲಿ ಕತಾರ್ ಗೆ ಭೇಟಿ ನೀಡಿದ ಸಂದರ್ಭದಲ್ಲಿ ಭೇಟಿಯಾಗಿದ್ದ ಅವರು ನಿಜವಾದ ಸ್ನೇಹಿತ ಎಂದು ಶ್ರೀ ನರೇಂದ್ರ ಮೋದಿ ಅವರು ಸ್ಮರಿಸಿದರು.

ಪ್ರಧಾನಮಂತ್ರಿ ಅವರು ಕತಾರ್ ನ ಅಮೀರ್ ಘನತೆವೆತ್ತ ಶೇಖ್ ತಮೀಮ್ ಬಿನ್ ಹಮದ್ ಅಲ್ ಥಾನಿ, ಇಡೀ ರಾಜಮನೆತನ ಮತ್ತು ಕತಾರ್ ಜನತೆಗೆ ತಮ್ಮ ಪ್ರಾಮಾಣಿಕ ಸಂತಾಪವನ್ನು ತಿಳಿಸಿದರು.

ಪ್ರಧಾನಮಂತ್ರಿ ಅವರು ತಮ್ಮ ಎಕ್ಸ್ ಖಾತೆಯಲ್ಲಿ ಹೀಗೆ ಬರೆದಿದ್ದಾರೆ;

“ಕತಾರ್ ದೇಶದ ಅಮೀರ್ ಘನತೆವೆತ್ತ ಶೇಖ್ ಹಮದ್ ಬಿನ್ ಖಲೀಫಾ ಅಲ್ ಥಾನಿ ಅವರ ನಿಧನಕ್ಕೆ ನಾವು ತೀವ್ರ ಸಂತಾಪ ಸೂಚಿಸುತ್ತೇವೆ. ಕತಾರ್ ಅನ್ನು ಹೆಚ್ಚಿನ ಮಟ್ಟದ ಅಭಿವೃದ್ಧಿ ಮತ್ತು ಸಮೃದ್ಧಿಯತ್ತ ಮುನ್ನಡೆಸಿದ ದೂರದೃಷ್ಟಿಯ ನಾಯಕ, 2024 ರ ಫೆಬ್ರವರಿಯಲ್ಲಿ ಕತಾರ್ ಗೆ ನನ್ನ ಕೊನೆಯ ಭೇಟಿಯ ಸಮಯದಲ್ಲಿ ನಾನು ಭೇಟಿಯಾಗುವ ಗೌರವವನ್ನು ಹೊಂದಿದ್ದ ನಿಜವಾದ ಸ್ನೇಹಿತ ಎಂದು ನಾವು ಅವರನ್ನು ನೆನಪಿಸಿಕೊಳ್ಳುತ್ತೇವೆ. ಕತಾರ್ ನ ಅಮೀರ್ ಘನತೆವೆತ್ತ ಶೇಖ್ ತಮೀಮ್ ಬಿನ್ ಹಮದ್ ಅಲ್ ಥಾನಿ ಮತ್ತು ಇಡೀ ರಾಜಮನೆತನ ಮತ್ತು ಕತಾರ್ ಜನತೆಗೆ ನನ್ನ ಪ್ರಾಮಾಣಿಕ ಸಂತಾಪವನ್ನು ತಿಳಿಸುತ್ತೇನೆ. ಅಗಲಿದ ಆತ್ಮಕ್ಕೆ ಶಾಶ್ವತ ಶಾಂತಿ ಸಿಗಲಿ.

@TamimBinHamad”

 

*****