Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಕೇರಳದ ಪ್ರವಾಹ ಪರಿಸ್ಥಿತಿಯ ಕುರಿತಂತೆ ಕೇರಳ ಮುಖ್ಯಮಂತ್ರಿಗಳೊಂದಿಗೆ ಮಾತನಾಡಿದ ಪ್ರಧಾನಿ


ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಕೇರಳ ರಾಜ್ಯದಲ್ಲಿ ತಲೆದೋರಿರುವ ಪ್ರವಾಹ ಪರಿಸ್ಥಿತಿ ಕುರಿತಂತೆ ಅಲ್ಲಿನ ಮುಖ್ಯಮಂತ್ರಿ ಶ್ರೀ ಪಿಣರಾಯಿ ವಿಜಯನ್ ಅವರೊಂದಿಗೆ ಮಾತನಾಡಿದರು.

“ಕೇರಳ ಮುಖ್ಯಮಂತ್ರಿ ಶ್ರೀ ಪಿಣರಾಯಿ ವಿಜಯನ್ ಅವರೊಂದಿಗೆ ಇಂದು ಬೆಳಗ್ಗೆಯೂ ಮಾತನಾಡಿದ್ದೇನೆ. ನಾವು ರಾಜ್ಯದಲ್ಲಿನ ಪ್ರವಾಹ ಪರಿಸ್ಥಿತಿಯ ಬಗ್ಗೆ ಚರ್ಚಿಸಿದ್ದೇವೆ. ರಕ್ಷಣಾ ಸಚಿವಾಲಯಕ್ಕೆ ಪರಿಹಾರ ಮತ್ತು ರಕ್ಷಣಾ ಕಾರ್ಯಾಚರಣೆಯನ್ನು ತೀವ್ರಗೊಳಿಸುವಂತೆ ಸೂಚಿಸಿದ್ದೇವೆ. ಕೇರಳದ ಜನರ ಸುರಕ್ಷತೆ ಮತ್ತು ಕ್ಷೇಮಕ್ಕಾಗಿ ಪ್ರಾರ್ಥಿಸುತ್ತೇನೆ”, ಪ್ರಧಾನಿ ಹೇಳಿದ್ದಾರೆ.

***