ಪಿಎಂಇಂಡಿಯಾ
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಕೇಂದ್ರ ಸಚಿವ ಸಂಪುಟ ಸಭೆ ಇಂದು, ಕೌಶಲ್ಯ ಅಭಿವೃದ್ಧಿ ಮತ್ತು ವಿದ್ಯಾರ್ಹತೆಗಳ ಮಾನ್ಯತೆಯ ಸಹಕಾರಕ್ಕಾಗಿ ಭಾರತ ಮತ್ತು ಖತಾರ್ ನಡುವಿನ ತಿಳಿವಳಿಕೆ ಒಪ್ಪಂದಕ್ಕೆ ತನ್ನ ಅನುಮೋದನೆ ನೀಡಿದೆ.
ಈ ತಿಳಿವಳಿಕೆ ಒಪ್ಪಂದವು ಕಾರ್ಯಪಡೆಯ ಸಂಚಾರ, ಕೌಶಲ್ಯ ಅಭಿವೃದ್ಧಿ ಮತ್ತು ಖತಾರ್ ನಲ್ಲಿ ಸಾಗರೋತ್ತರ ಉದ್ಯೋಗದಲ್ಲಿ ಯುವಕರನ್ನು ಭರ್ತಿ ಮಾಡಲು ಅವಕಾಶ ಕಲ್ಪಿಸಲಿದೆ.