Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಜನತೆಗೆ ರಾಮನವಮಿ ಪ್ರಯುಕ್ತ ಶುಭ ಹಾರೈಸಿದ ಪ್ರಧಾನಮಂತ್ರಿ


ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಪವಿತ್ರ ರಾಮನವಮಿಯ ಸಂದರ್ಭದಲ್ಲಿ ದೇಶದ ಜನತೆಗೆ ಶುಭ ಹಾರೈಸಿದ್ದಾರೆ. ತ್ಯಾಗ, ತಪಸ್ಸು ಮತ್ತು ಸ್ವಯಂ ಸಂಯಮದಿಂದ ಗುರುತಿಸಲ್ಪಟ್ಟ ಮರ್ಯಾದಾ ಪುರುಷೋತ್ತಮ ಭಗವಾನ್ ರಾಮನ ಜೀವನವು ಪ್ರತಿಯೊಂದು ಪರಿಸ್ಥಿತಿಯನ್ನು ಶಕ್ತಿ ಮತ್ತು ದೃಢನಿಶ್ಚಯದಿಂದ ಎದುರಿಸಲು ಜನರನ್ನು ಪ್ರೇರೇಪಿಸುತ್ತದೆ ಎಂದು ಶ್ರೀ ಮೋದಿ ಹೇಳಿದ್ದಾರೆ.

ಭಗವಾನ್ ರಾಮನ ಆದರ್ಶಗಳ ನಿರಂತರ ಪ್ರಸ್ತುತತೆಯನ್ನು ಒತ್ತಿ ಹೇಳಿದ ಪ್ರಧಾನಮಂತ್ರಿಯವರು, ಈ ಮೌಲ್ಯಗಳು ಭಾರತದ ಜನರಿಗೆ ಮಾತ್ರವಲ್ಲದೆ ಮುಂದಿನ ಎಲ್ಲಾ ಕಾಲದಲ್ಲೂ ಇಡೀ ಮನುಕುಲಕ್ಕೆ ಮಾರ್ಗದರ್ಶಕ ಶಕ್ತಿಯಾಗಿ ಉಳಿಯುತ್ತವೆ ಎಂದಿದ್ದಾರೆ.

ಪ್ರಧಾನಮಂತ್ರಿಯವರು ತಮ್ಮ ಎಕ್ಸ್ ಖಾತೆಯಲ್ಲಿ ಹೀಗೆ ಬರೆದಿದ್ದಾರೆ:

“देशभर के मेरे परिवारजनों को रामनवमी की असीम शुभकामनाएं। त्याग, तप और संयम से भरे मर्यादा पुरुषोत्तम के जीवन से हमें हर परिस्थिति का पूरे सामर्थ्य से सामना करने की प्रेरणा मिलती है। उनके आदर्श अनंतकाल तक भारतवासियों के साथ-साथ संपूर्ण मानवता के पथ-प्रदर्शक बने रहेंगे। मेरी कामना है कि भगवान राम की कृपा से सबका कल्याण हो, जिससे विकसित और आत्मनिर्भर भारत के संकल्प की सिद्धि का मार्ग प्रशस्त हो।”

 

*****