Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಜನಪ್ರತಿನಿಧಿಯ ನಿಜವಾದ ಸಂಕಲ್ಪವನ್ನು ಪ್ರಮುಖವಾಗಿ ಪ್ರಸ್ತಾಪಿಸುವ ಸಂಸ್ಕೃತ ಸುಭಾಷಿತ ಹಂಚಿಕೊಂಡ ಪ್ರಧಾನಮಂತ್ರಿ


ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಇಂದು ಜನಪ್ರತಿನಿಧಿಯ ನಿಜವಾದ ಸಂಕಲ್ಪವನ್ನು ಪ್ರಮುಖವಾಗಿ ಪ್ರಸ್ತಾಪಿಸುವ ಸಂಸ್ಕೃತ ಸುಭಾಷಿತವನ್ನು ಹಂಚಿಕೊಂಡಿದ್ದಾರೆ.

ದೇಶದ ಜಾಗೃತ ನಾಗರಿಕರಾಗಿ, ಪ್ರಜಾಪ್ರಭುತ್ವವನ್ನು ಮತ್ತಷ್ಟು ಬಲವರ್ಧನೆಗೊಳಿಸಲು ದಾಖಲೆಯ ಮತದಾನವನ್ನು ಖಾತ್ರಿಪಡಿಸಿಕೊಳ್ಳುವುದು ನಮ್ಮ ಕರ್ತವ್ಯ ಎಂದು ಪ್ರಧಾನಿ ಹೇಳಿದರು.

ಪ್ರಧಾನಮಂತ್ರಿ ತಮ್ಮ ಸಾಮಾಜಿಕ ಜಾಲತಾಣ  X  ಪೋಸ್ಟ್ ನಲ್ಲಿ ಹೀಗೆ ಬರೆದಿದ್ದಾರೆ:

“देश के एक सजग नागरिक के रूप में हमारा कर्तव्य है कि हम लोकतंत्र को और अधिक सशक्त बनाने के लिए रिकॉर्ड मतदान सुनिश्चित करें। इस तरह हम न केवल भारतवर्ष के नवनिर्माण में अपनी सक्रिय भागीदारी निभा सकते हैं, बल्कि एक समर्थ और समृद्ध राष्ट्र की नींव को और मजबूत कर सकते हैं।

राज्ञो हि व्रतमुत्थानं यज्ञः कार्यानुशासनम्।

दक्षिणा वृत्तिसाम्यं च दीक्षितस्याभिषेचनम्॥”

ಜನರ ಕಲ್ಯಾಣದ ದೂರದೃಷ್ಟಿಯಿಂದ ಅವರನ್ನು ನಿರಂತರವಾಗಿ ಮೇಲೆತ್ತುವುದು, ಪವಿತ್ರ ಜವಾಬ್ದಾರಿಯಾಗಿ ಕರ್ತವ್ಯಗಳನ್ನು ನಿಷ್ಠೆಯಿಂದ ನಿರ್ವಹಿಸುವುದು, ನ್ಯಾಯಯುತ ತೀರ್ಪನ್ನು ಖಚಿತಪಡಿಸಿಕೊಳ್ಳುವುದು, ಉದಾರವಾಗಿ ನೆರವು ನೀಡುವುದು,  ಎಲ್ಲರನ್ನೂ ಸಮಾನತೆಯಿಂದ ನಡೆಸಿಕೊಳ್ಳುವುದು ಮತ್ತು ಪವಿತ್ರ ಮನೋಭಾವದಿಂದ ತನ್ನನ್ನು ತಾನು ಶುದ್ಧ, ಶಿಸ್ತುಬದ್ಧ ಮತ್ತು ಬದ್ಧವಾಗಿಟ್ಟುಕೊಳ್ಳುವುದು ಜನಪ್ರತಿನಿಧಿಯ ನಿಜವಾದ ಸಂಕಲ್ಪವಾಗಿದೆ.

 

*****