Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಢಾಕಾದ ಮೇಲಿನ ದಾಳಿಯಲ್ಲುಂಟಾದ ಪ್ರಾಣ ಹಾನಿಗೆ ಪ್ರಧಾನಿ ಶೋಕ


ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಢಾಕಾದ ದಾಳಿಯಲ್ಲಿ ಉಂಟಾದ ಜೀವಹಾನಿಗೆ ತೀವ್ರ ಶೋಕ ವ್ಯಕ್ತಪಡಿಸಿದ್ದಾರೆ.

“ಢಾಕಾದಲ್ಲಿ ನಡೆದ ದಾಳಿ ನಮಗೆ ಶಬ್ದಗಳಿಗೆ ಅತೀತವಾದ ನೋವನ್ನು ತಂದಿದೆ. ನಾನು ಪ್ರಧಾನಮಂತ್ರಿ ಶೇಖ್ ಹಸೀನಾ ಅವರೊಂದಿಗೆ ಮಾತನಾಡಿದ್ದು, ಹೇಯ ದಾಳಿಯನ್ನು ಬಲವಾಗಿ ಖಂಡಿಸಿದ್ದೇನೆ.

.
ಭಾರತವು ಈ ಸಂಕಷ್ಟದ ಸಂದರ್ಭದಲ್ಲಿ ಬಾಂಗ್ಲಾದೇಶದ ನಮ್ಮ ಸೋದರ ಮತ್ತು ಸೋದರಿಯರ ಕುಟುಂಬದೊಂದಿಗೆ ದೃಢವಾಗಿ ನಿಲ್ಲುತ್ತದೆ.

ಘಟನೆಯಲ್ಲಿ ಬಲಿಯಾದವರ ಕುಟುಂಬದೊಂದಿಗೆ ನನ್ನ ಸಂವೇದನೆ ಇದೆ. ಗಾಯಗೊಂಡಿರುವವರು ಶೀಘ್ರ ಗುಣಮುಖವಾಗಲಿ ಎಂದು ಪ್ರಾರ್ಥಿಸುತ್ತೇನೆ.”, ಎಂದು ಪ್ರಧಾನಮಂತ್ರಿ ಹೇಳಿದ್ದಾರೆ.