Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ತುರ್ತು ಪರಿಸ್ಥಿತಿಯು ಜನರ ಸ್ವಾತಂತ್ರ್ಯ ಮತ್ತು ಆಕಾಂಕ್ಷೆಗಳನ್ನು ಹೇಗೆ ಬಾಧಿಸಿತು ಎಂಬ ಲೇಖನವನ್ನು ಹಂಚಿಕೊಂಡಿರುವ ಪ್ರಧಾನಮಂತ್ರಿ


ಕೇಂದ್ರ ಸಚಿವರಾದ ಶ್ರೀ ಗಜೇಂದ್ರ ಸಿಂಗ್ ಶೇಖಾವತ್ ಅವರು ತುರ್ತು ಪರಿಸ್ಥಿತಿ ಮತ್ತು ಅದು ಜನರ ಸ್ವಾತಂತ್ರ್ಯ ಮತ್ತು ಆಕಾಂಕ್ಷೆಗಳ ಮೇಲೆ ಹೇಗೆ ಪರಿಣಾಮ ಬೀರಿತು ಎಂಬ ಬಗ್ಗೆ ಬರೆದಿರುವ ಲೇಖನವನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಹಂಚಿಕೊಂಡಿದ್ದಾರೆ.

ಸೇವಾ ಪರ್ವ ಮತ್ತು ಸ್ವಾತಂತ್ರ್ಯದ ಅಮೃತ ಮಹೋತ್ಸವದಂತಹ ಸರ್ಕಾರದ ಉಪಕ್ರಮಗಳು ಇತಿಹಾಸದ ಬಗ್ಗೆ ಜಾಗೃತಿ ಮೂಡಿಸುತ್ತಾ ಸಾಂಸ್ಕೃತಿಕ ಸ್ಮರಣೆಯನ್ನು ಸಂರಕ್ಷಿಸುವ ಮತ್ತು ರಾಷ್ಟ್ರೀಯತೆಯ ಭಾವನೆಯನ್ನು ಗಾಢವಾಗಿಸುವ ಮೂಲಕ ಸಾಂವಿಧಾನಿಕ ಮೌಲ್ಯಗಳನ್ನು ಬಲಪಡಿಸುತ್ತವೆ ಎಂಬುದನ್ನು ಲೇಖನ ಒತ್ತಿಹೇಳುತ್ತದೆ ಎಂದು ಶ್ರೀ ಮೋದಿ ಅವರು ಹೇಳಿದ್ದಾರೆ.

ಶ್ರೀ ಮೋದಿ ಅವರು ಎಕ್ಸ್ ನಲ್ಲಿ ಹೀಗೆ ಪೋಸ್ಟ್ ಮಾಡಿದ್ದಾರೆ:

ದೇಶವು #SamvidhanHatyaDiwas ಅನ್ನು ಸ್ಮರಿಸುತ್ತಿರುವ ಈ ಸಂದರ್ಭದಲ್ಲಿ ಕೇಂದ್ರ ಸಚಿವರಾದ ಶ್ರೀ @gssjodhpur ಅವರು ತುರ್ತು ಪರಿಸ್ಥಿತಿ ಹಾಗೂ ಅದು ಜನರ ಸ್ವಾತಂತ್ರ್ಯ ಮತ್ತು ಆಕಾಂಕ್ಷೆಗಳನ್ನು ಹೇಗೆ ಬಾಧಿಸಿತು ಎಂಬ ಬಗ್ಗೆ ಬರೆದಿದ್ದಾರೆ.

ಸೇವಾ ಪರ್ವ್ ಮತ್ತು ಆಜಾದಿ ಕಾ ಅಮೃತ್ ಮಹೋತ್ಸವದಂತಹ ಸರ್ಕಾರದ ಉಪಕ್ರಮಗಳು ಇತಿಹಾಸಿಕದ ಜಾಗೃತಿಯನ್ನು ಪೋಷಿಸುತ್ತಾ ಸಾಂಸ್ಕೃತಿಕ ಸ್ಮರಣೆಯನ್ನು ಸಂರಕ್ಷಿಸುವ ಮತ್ತು ರಾಷ್ಟ್ರೀಯತೆಯ ಭಾವನೆಯನ್ನು ಆಳವಾಗಿಸುವ ಮೂಲಕ ಸಾಂವಿಧಾನಿಕ ಮೌಲ್ಯಗಳನ್ನು ಬಲಪಡಿಸುತ್ತವೆ ಎಂದು ಒತ್ತಿ ಹೇಳಿದ್ದಾರೆ.

 

*****