Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ನರ್ಮದಾ ನದಿಗೆ ಅಡ್ಡಲಾಗಿ ಅಣೆಕಟ್ಟೆಗೆ ಶಂಕುಸ್ಥಾಪನೆ ನೆರವೇರಿಸಿದ ಪ್ರಧಾನಿ, ಭಾರುಚ್ ನಲ್ಲಿ ಸಾರ್ವಜನಿಕ ಸಭೆ ಉದ್ದೇಶಿಸಿ ಭಾಷಣ


ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ನರ್ಮದಾ ನದಿಗೆ ಅಡ್ಡಲಾಗಿ ನಿರ್ಮಿಸಲುದ್ದೇಶಿಸಿರುವ ಬದ್ಭೂತ್ ಅಣೆಕಟ್ಟೆಗೆ ಶಂಕುಸ್ಥಾಪನೆ ಅಂಕವಾಗಿ ಫಲಕ ಅನಾವರಣ ಮಾಡಿದರು. ಭಾರುಚ್ ನಲ್ಲಿ ಸಾರ್ವಜನಿಕ ಸಭೆಯಲ್ಲಿ ಪ್ರಧಾನಮಂತ್ರಿಯವರು, ಉದ್ನಾ (ಸೂರತ್, ಗುಜರಾತ್) ಮತ್ತು ಜೈನಗರ್ (ಬಿಹಾರ) ನಡುವಿನ ಅಂತ್ಯೋದಯ ಎಕ್ಸ್ ಪ್ರೆಸ್ ಗೆ ಹಸಿರು ನಿಶಾನೆ ತೋರಿದರು. ಗುಜರಾತ್ ನರ್ಮದಾ ರಸಗೊಬ್ಬರ ನಿಗಮ ನಿಯಮಿತದ ವಿವಿಧ ಘಟಕಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ಅಂಗವಾಗಿ ಅವರು ಫಲಕ ಅನಾವರಣ ಮಾಡಿದರು.

ಸಾರ್ವಜನಿಕ ಸಭೆ ಉದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿ, ಅಂತ್ಯೋದಯ ಎಕ್ಸ್ ಪ್ರೆಸ್ ಒಂದು ಅದ್ಭುತ ಉಪಕ್ರಮವಾಗಿದ್ದು, ಮನೆಯಿಂದ ದೂರದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಬಿಹಾರ ಅಥವಾ ಉತ್ತರ ಪ್ರದೇಶದ ಜನರನ್ನು ಸಂಪರ್ಕಿಸುತ್ತದೆ ಎಂದರು. ಛಾತ್ ಪೂಜೆಗೆ ಮನೆಗೆ ಹೋಗುವ ಬಿಹಾರ ಮತ್ತು ಉತ್ತರ ಪ್ರದೇಶದ ಜನತೆಗೆ ಈ ರೈಲಿನಿಂದ ಸುಲಭವಾಗುತ್ತದೆ ಎಂದೂ ಅವರು ಹೇಳಿದರು.

ಬೇವು ಲೇಪಿತ ಯೂರಿಯಾ ರೈತರಿಗೆ ಅನುಕೂಲಕರವಾಗಿದೆ ಮತ್ತು ಇದು ಭ್ರಷ್ಟಾಚಾರ ಮತ್ತು ಕಳವನ್ನು ತಪ್ಪಿಸಿದೆ ಎಂದು ಪ್ರಧಾನಮಂತ್ರಿ ಹೇಳಿದರು.

ಗುಜರಾತ್ ಪಶುಸಂಗೋಪನೆಯಲ್ಲಿ ದಾಪುಗಾಲು ಹಾಕುತ್ತಿದ್ದು, ಇದು ರೈತರಿಗೆ ನೆರವಾಗಿದೆ ಎಂದು ಪ್ರಧಾನಮಂತ್ರಿ ಹೇಳಿದರು. ಗುಜರಾತ್ ನ ಪಶು ಆರೋಗ್ಯ ಮೇಳಗಳ ಅಧ್ಯಯನ ನಡೆಸಲು ತಂಡವೊಂದನ್ನು ಕಳುಹಿಸುವಂತೆ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರಿಗೆ ತಿಳಿಸಿರುವುದಾಗಿ ಪ್ರಧಾನಿ ಹೇಳಿದರು. ಇದೇ ರೀತಿಯ ಮೇಳವನ್ನು ಇತ್ತೀಚೆಗೆ ವಾರಾಣಸಿಯಲ್ಲಿ ಆಯೋಜಿಸಲಾಗಿತ್ತು, ತಾವು ಅದರಲ್ಲಿ ಭಾಗಿಯಾಗಿದ್ದೆ ಎಂದರು.

***