Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಪ್ರಕೃತಿಯನ್ನು ಸಂರಕ್ಷಿಸುವ ಮಹತ್ವವನ್ನು ಬಿಂಬಿಸುವ ಸಂಸ್ಕೃತ ಸುಭಾಷಿತಂ ಹಂಚಿಕೊಂಡ ಪ್ರಧಾನಮಂತ್ರಿ


ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಮನುಕುಲದ ಕಲ್ಯಾಣವು ಪ್ರಕೃತಿಯ ರಕ್ಷಣೆ ಮತ್ತು ಗೌರವದಲ್ಲಿ ಅಡಗಿದೆ ಎಂದು ಹೇಳಿದ್ದಾರೆ. ಭಾರತದ ಕಾಲಾತೀತ ಸಂಪ್ರದಾಯಗಳು ಈ ನ್ಯಾಯಯುತ ಜೀವನ ವಿಧಾನವನ್ನು ಎತ್ತಿಹಿಡಿಯಲು ಮತ್ತು ನೈಸರ್ಗಿಕ ಪ್ರಪಂಚದೊಂದಿಗೆ ಸಾಮರಸ್ಯದಿಂದ ಬದುಕಲು ನಮಗೆ ಸ್ಫೂರ್ತಿ ನೀಡುತ್ತವೆ ಎಂದು ಅವರು ಹೇಳಿದರು.

ಪ್ರಧಾನಮಂತ್ರಿ ಅವರು ಸಂಸ್ಕೃತ ಸುಭಾಷಿತಂ ಹಂಚಿಕೊಂಡಿದ್ದಾರೆ –

“लोकपालाश्च ते सर्वे वासवप्रमुखास्तथा। ऋतवः षट् च ते सर्वे मासाः संवत्सराः क्षपाः॥

दिनानि च मुहूर्ताश्च स्वस्ति कुर्वन्तु ते सदा। श्रुतिः स्मृतिश्च धर्मश्च पातु त्वां पुत्र सर्वतः॥”

ಪ್ರಕೃತಿ ಮತ್ತು ಸದಾಚಾರದೊಂದಿಗೆ ಸಾಮರಸ್ಯದಿಂದ ಬದುಕಿದ ಜೀವನವು ಸಂತೋಷ, ಭದ್ರತೆ ಮತ್ತು ಯೋಗಕ್ಷೇಮದ ಅಡಿಪಾಯವಾಗಿದೆ ಎಂದು ಸುಭಾಷಿತಂ ತಿಳಿಸುತ್ತದೆ. ಆದ್ದರಿಂದ, ದಿಕ್ಕುಗಳ ರಕ್ಷಕರು, ಇಂದ್ರನ ನೇತೃತ್ವದ ಪ್ರಮುಖ ದೇವತೆಗಳು, ಆರು ಋತುಗಳು, ಎಲ್ಲಾ ತಿಂಗಳುಗಳು, ವರ್ಷಗಳು, ರಾತ್ರಿಗಳು, ದಿನಗಳು ಮತ್ತು ಶುಭ ಕ್ಷಣಗಳು ಯಾವಾಗಲೂ ಆಶೀರ್ವಾದ ಮತ್ತು ಸಮೃದ್ಧಿಯನ್ನು ತರಲಿ. ವೇದಗಳು, ಪವಿತ್ರ ಸಂಪ್ರದಾಯಗಳು ಮತ್ತು ಸದಾಚಾರವು ಎಲ್ಲರನ್ನೂ ಎಲ್ಲಾ ರೀತಿಯಲ್ಲೂ ಮತ್ತು ಎಲ್ಲಾ ಸಮಯದಲ್ಲೂ ರಕ್ಷಿಸಲಿ.

ಪ್ರಧಾನಮಂತ್ರಿ ಅವರು ತಮ್ಮ ಎಕ್ಸ್ ಖಾತೆಯಲ್ಲಿ ಹೀಗೆ ಬರೆದಿದ್ದಾರೆ;

“प्रकृति के संरक्षण और सम्मान में ही मानवता का कल्याण निहित है। हमारी परंपरा भी हमें इसी धर्मसम्मत आचरण की प्रेरणा देती है।

लोकपालाश्च ते सर्वे वासवप्रमुखास्तथा। ऋतवः षट् च ते सर्वे मासाः संवत्सराः क्षपाः॥

दिनानि च मुहूर्ताश्च स्वस्ति कुर्वन्तु ते सदा। श्रुतिः स्मृतिश्च धर्मश्च पातु त्वां पुत्र सर्वतः॥”

 

*****