ಪಿಎಂಇಂಡಿಯಾ
ತಮಿಳುನಾಡಿನ ಮುಖ್ಯಮಂತ್ರಿ ಶ್ರೀ. ಓ. ಪನ್ನೀರುಸೆಲ್ವಂ ಇಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದರು.
ಸುಪ್ರೀಂಕೋರ್ಟ್ ಜಲ್ಲಿಕಟ್ಟು ಮೇಲೆ ವಿಧಿಸಿರುವ ನಿಷೇಧ ಚರ್ಚೆಗೆ ಬಂತು. ಜಲ್ಲಿಕಟ್ಟಿನ ಸಾಂಸ್ಕೃತಿಕ ಮಹತ್ವವನ್ನು ಶ್ಲಾಘಿಸಿದ ಪ್ರಧಾನಮಂತ್ರಿಯವರು, ಪ್ರಸ್ತುತ ಇದು ನ್ಯಾಯಾಲಯದಲ್ಲಿ ವಿಚಾರಣೆಯಲ್ಲಿರುವ ವಿಷಯವಾಗಿದೆ ಎಂದು ತಿಳಿಸಿದರು.
ರಾಜ್ಯ ಸರ್ಕಾರ ಕೈಗೊಳ್ಳುವ ಕ್ರಮಗಳಿಗೆ ಕೇಂದ್ರ ಬೆಂಬಲವಾಗಿರುತ್ತದೆ ಎಂದರು
ಬರ ಪರಿಸ್ಥಿತಿಯನ್ನು ಎದುರಿಸಲು ಎಲ್ಲ ಅಗತ್ಯ ನೆರವಿನ ಭರವಸೆಯನ್ನು ಮುಖ್ಯಮಂತ್ರಿಗಳಿಗೆ ಪ್ರಧಾನಿ ನೀಡಿದರು, ಮತ್ತು ಶೀಘ್ರವೇ ಕೇಂದ್ರದ ತಂಡವನ್ನು ನಿಯೋಜಿಸುವುದಾಗಿ ತಿಳಿಸಿದರು.
AKT/SH