Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಪ್ರಧಾನಮಂತ್ರಿ ಅವರು  ಕಜಾಕಿಸ್ತಾನ್, ಕಿರ್ಗಿಸ್ತಾನ್, ತಜಿಕಿಸ್ತಾನ್, ತುರ್ಕಮೆನಿಸ್ತಾನ್ ಮತ್ತು ಉಜ್ಬೇಕಿಸ್ತಾನ್ ವಿದೇಶಾಂಗ ಸಚಿವರನ್ನು ಭೇಟಿ ಮಾಡಿದರು


ಕಜಾಕಿಸ್ತಾನ್ ಗಣರಾಜ್ಯ, ಕಿರ್ಗಿಸ್ತಾನ್ ಗಣರಾಜ್ಯ, ತಜಿಕಿಸ್ತಾನ್ ಗಣರಾಜ್ಯ, ತುರ್ಕಮೆನಿಸ್ತಾನ್ ಮತ್ತು ಉಜ್ಬೇಕಿಸ್ತಾನ್ ಗಣರಾಜ್ಯದ ವಿದೇಶಾಂಗ ಮಂತ್ರಿಗಳು ಇಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಜಂಟಿಯಾಗಿ ಭೇಟಿ ಮಾಡಿದರು.

ನವದೆಹಲಿಯಲ್ಲಿ ನಡೆದ ಭಾರತ-ಮಧ್ಯ ಏಷ್ಯಾ ಸಂವಾದದ 4ನೇ ಸಭೆಯಲ್ಲಿ ನಡೆದ ಸಕಾರಾತ್ಮಕ ಮತ್ತು ಫಲಪ್ರದ ಚರ್ಚೆಗಳ ಕುರಿತು ವಿದೇಶದ ಸಚಿವರು ಪ್ರಧಾನಮಂತ್ರಿಯವರಿಗೆ ವಿವರಿಸಿದರು.

ಮಧ್ಯ ಏಷ್ಯಾದ ದೇಶಗಳೊಂದಿಗಿನ ಸಂಬಂಧಗಳು ಯಾವಾಗಲೂ ಭಾರತಕ್ಕೆ ಪ್ರಮುಖ ಆದ್ಯತೆಯಾಗಿದೆ ಎಂದು ಪ್ರಧಾನಮಂತ್ರಿಯವರು ಒತ್ತಿ ಹೇಳಿದರು.  ಈ ದೇಶಗಳ ಜನರ ನಡುವಿನ ಐತಿಹಾಸಿಕ ಸಂಬಂಧಗಳನ್ನು ಒತ್ತಿ ಹೇಳಿದ ಅವರು, ವರ್ಧಿತ ಆರ್ಥಿಕ ಏಕೀಕರಣ, ವಿಸ್ತೃತ ಸಂಪರ್ಕ, ಹೆಚ್ಚಿನ ರಕ್ಷಣಾ ಹಾಗು ಭದ್ರತಾ ಸಹಕಾರ ಮತ್ತು ಹೊಸ ಮತ್ತು ಉದಯೋನ್ಮುಖ ಕ್ಷೇತ್ರಗಳಲ್ಲಿ ವಿಶಾಲ ಸಹಕಾರಕ್ಕಾಗಿ ತಮ್ಮ ದೃಷ್ಟಿಕೋನವನ್ನು ವಿವರಿಸಿದರು.

ಭಾರತ ಮತ್ತು ಮಧ್ಯ ಏಷ್ಯಾ ನಡುವಿನ ಬಲವಾದ ಪಾಲುದಾರಿಕೆಯು ಸಾಮಾನ್ಯ ಪ್ರಾದೇಶಿಕ ಮತ್ತು ಜಾಗತಿಕ ಸವಾಲುಗಳನ್ನು ಎದುರಿಸಲು ಪ್ರಬಲ ಶಕ್ತಿಯಾಗಿ ಕಾರ್ಯನಿರ್ವಹಿಸುತ್ತದೆ ಎಂದು ಪ್ರಧಾನಮಂತ್ರಿಯವರು  ಒತ್ತಿ ಹೇಳಿದರು. 

ಮಧ್ಯ ಏಷ್ಯಾದ ವಿದೇಶಾಂಗ ಮಂತ್ರಿಗಳು ಏಪ್ರಿಲ್ 22, 2025 ರಂದು ಪಹಲ್ಗಾಮ್ ನಲ್ಲಿ ನಡೆದ ಭಯೋತ್ಪಾದಕ ದಾಳಿಯನ್ನು ಬಲವಾಗಿ ಖಂಡಿಸಿದರು ಮತ್ತು ಗಡಿಯಾಚೆಗಿನ ಭಯೋತ್ಪಾದನೆಯ ವಿರುದ್ಧ  ಭಾರತದ ಹೋರಾಟಕ್ಕೆ ಬೆಂಬಲ ವ್ಯಕ್ತಪಡಿಸಿದರು.

ಭಾರತದಲ್ಲಿ ನಡೆಯಲಿರುವ ಎರಡನೇ ಭಾರತ-ಮಧ್ಯ ಏಷ್ಯಾ ಶೃಂಗಸಭೆಗೆ ಪ್ರಧಾನಮಂತ್ರಿಯವರು ಎಲ್ಲಾ ಮಧ್ಯ ಏಷ್ಯಾದ ದೇಶಗಳ ನಾಯಕರನ್ನು ಆಹ್ವಾನಿಸಿದರು.

 

*****