Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಗೆ ದೂರವಾಣಿ ಕರೆ ಮಾಡಿ ಸಮಾಲೋಚನೆ ನಡೆಸಿದ ಮಾರಿಷಸ್ ಪ್ರಧಾನಮಂತ್ರಿ


ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಮಾರಿಷಸ್ ಗಣರಾಜ್ಯದ ಪ್ರಧಾನಮಂತ್ರಿ ಗೌರವಾನ್ವಿತ ಡಾ. ನವೀನ್ ಚಂದ್ರ ರಾಮಗೂಲಂ ಅವರೊಂದಿಗೆ ದೂರವಾಣಿ ಮೂಲಕ ಸಮಾಲೋಚನೆ ನಡೆಸಿದರು.

ಉಭಯ ನಾಯಕರು 2025ರ ಸೆಪ್ಟೆಂಬರ್ ನಲ್ಲಿ ವಾರಾಣಸಿಯಲ್ಲಿ ನಡೆದ ಕೊನೆಯ ಸಭೆ ನಂತರ ದ್ವಿಪಕ್ಷೀಯ ಸಹಕಾರ ಸಂಬಂಧದಲ್ಲಿ ಆಗಿರುವ ಪ್ರಗತಿಯನ್ನು ಪರಿಶೀಲಿಸಿದರು. ಈ ವೇಳೆ, ಅಭಿವೃದ್ಧಿ ಸಹಭಾಗಿತ್ವ, ಸಾಮರ್ಥ್ಯ ವೃದ್ಧಿ ಮತ್ತು ಜನಕೇಂದ್ರಿತ ವಿಚಾರಗಳ ವಿನಿಮಯಕ್ಕೆ ಒತ್ತು ನೀಡಲಾಯಿತು.

ಉಭಯ ನಾಯಕರು, ಭಾರತ ಮತ್ತು ಮಾರಿಷಸ್ ನಡುವಿನ ಜನರ ಒಳಿತಿಗಾಗಿ ಕಾರ್ಯತಾಂತ್ರಿಕ ಪಾಲುದಾರಿಕೆಯನ್ನು ಮತ್ತಷ್ಟು ಉನ್ನತೀಕರಿಸುವ ಬದ್ಧತೆಯನ್ನು ಪುನರುಚ್ಚರಿಸಿದರು.

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಮಹಾಸಾಗರ ದೂರದೃಷ್ಟಿ, ಭಾರತದ ನೆರೆ-ಹೊರೆ ಮೊದಲು ನೀತಿಗಳಿಗೆ ಅನುಗುಣವಾಗಿ ಮಾರಿಷಸ್ ನ ಅಭಿವೃದ್ಧಿ ಆದ್ಯತೆಗಳಿಗೆ ಭಾರತ ನಿರಂತರ ಬೆಂಬಲ ನೀಡಲಿದೆ ಮತ್ತು ಜಾಗತಿಕ ದಕ್ಷಿಣದ ಧ್ವನಿ ಎತ್ತಲು ಹಂಚಿಕೆಯ ಬದ್ಧತೆಯನ್ನು ಪುನರುಚ್ಚರಿಸಿದರು.

ಉಭಯ ನಾಯಕರು ಹಿಂದೂ ಮಹಾಸಾಗರ ಪ್ರದೇಶದಲ್ಲಿ ಶಾಂತಿ ಮತ್ತು ಸ್ಥಿರತೆ ನೆಲೆಸುವ ಉದ್ದೇಶದೊಂದಿಗೆ ಅತ್ಯಂತ ನಿಕಟವಾಗಿ ಕಾರ್ಯ ನಿರ್ವಹಿಸಲು ಒಪ್ಪಿಗೆ ಸೂಚಿಸಿದರು.

ದೆಹಲಿಯಲ್ಲಿ ಮುಂದಿನ ವಾರ ನಡೆಯಲಿರುವ ಎಐ ಇಂಪ್ಯಾಕ್ಟ್ ಶೃಂಗಸಭೆಯಲ್ಲಿ ಭಾಗವಹಿಸಲು ಆಮಂತ್ರಣ ನೀಡಿದ ಪ್ರಧಾನಮಂತ್ರಿ ನರೇಂದ್ರ ಮೋದಿ, ರಾಮಗೂಲಂ ಅವರ ಆಗಮನವನ್ನು ಎದುರು ನೋಡುತ್ತಿದ್ದೇವೆ ಎಂಬ ಸಂದೇಶವನ್ನು ರವಾನಿಸಿದರು.

 

*****