Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಬಂಕಿಮ್‌ ಚಂದ್ರ ಚಟ್ಟೋಪಾಧ್ಯಾಯ ಜಯಂತಿಯಂದು ಅವರಿಗೆ ಗೌರವ ನಮನ ಸಲ್ಲಿಸಿದ ಪ್ರಧಾನಮಂತ್ರಿ


ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಮಹಾನ್‌ ವ್ಯಕ್ತಿ ಬಂಕಿಮ್‌ ಚಂದ್ರ ಚಟ್ಟೋಪಾಧ್ಯಾಯ ಅವರ ಜಯಂತಿಯಂದು ಅವರಿಗೆ ಗೌರವ ನಮನ ಸಲ್ಲಿಸಿ, ಅವರನ್ನು ಸ್ಮರಿಸಿದರು. ಅವರ ಬರಹಗಳು ಭಾರತೀಯರ ತಲೆಮಾರುಗಳಲ್ಲಿ ದೇಶಭಕ್ತಿ ಮತ್ತು ಸಾಂಸ್ಕೃತಿಕ ಹೆಮ್ಮೆಯ ಸೂಧಿರ್ತಿಯನ್ನು ಹುಟ್ಟುಹಾಕಿದ ಅತ್ಯುನ್ನತ ಸಾಹಿತ್ಯಕ ದಿಗ್ಗಜರಾಗಿದ್ದರು.

ಈ ವರ್ಷದ ಮಹತ್ವವನ್ನು ಒತ್ತಿ ಹೇಳಿದ ಶ್ರೀ ನರೇಂದ್ರ ಮೋದಿ ಅವರು, ಭಾರತವು ವಂದೇ ಮಾತರಂನ 150ನೇ ವಾರ್ಷಿಕೋತ್ಸವವನ್ನು ಆಚರಿಸುತ್ತಿದೆ ಎಂದು ಹೇಳಿದರು. ವಂದೇ ಮಾತರಂ ಮೂಲಕ ಬಂಕಿಮ್‌ ಚಂದ್ರ ಚಟ್ಟೋಪಾಧ್ಯಾಯ ಅವರು ಭಾರತೀಯ ಸ್ವಾತಂತ್ರ್ಯ ಚಳವಳಿ ಮತ್ತು ರಾಷ್ಟ್ರಕ್ಕೆ ಅದರ ನಿರಂತರ ಸ್ಫೂರ್ತಿಯ ಮೂಲಗಳಲ್ಲಿ ಒಂದನ್ನು ಉಡುಗೊರೆಯಾಗಿ ನೀಡಿದರು ಎಂದು ಅವರು ಹೇಳಿದರು.

ಪ್ರಧಾನಮಂತ್ರಿ ಅವರು ಈ ಬಗ್ಗೆ ಎಕ್ಸ್‌ನಲ್ಲಿ ಹಂಚಿಕೊಂಡಿದ್ದಾರೆ:

ಮಹಾನ್‌ ವ್ಯಕ್ತಿ ಬಂಕಿಮ್‌ ಚಂದ್ರ ಚಟ್ಟೋಪಾಧ್ಯಾಯ ಅವರ ಜಯಂತಿಯಂದು ಅವರಿಗೆ ಗೌರವ ನಮನಗಳು.

ಅತ್ಯುನ್ನತ ಸಾಹಿತ್ಯ ದಿಗ್ಗಜರಾಗಿದ್ದ ಅವರ ಬರಹಗಳು ತಲೆಮಾರುಗಳ ಭಾರತೀಯರಲ್ಲಿ ದೇಶಭಕ್ತಿ ಮತ್ತು ಸಾಂಸ್ಕೃತಿಕ ಹೆಮ್ಮೆಯ ಮನೋಭಾವವನ್ನು ಜಾಗೃತಗೊಳಿಸಿದವು. ಅವರ ಶ್ರೀಮಂತ ಸಾಹಿತ್ಯ ಕೃತಿಗಳು ಮನಸ್ಸುಗಳನ್ನು ಬೆಳಗಿಸುತ್ತಲೇ ಇರುತ್ತವೆ ಮತ್ತು ರಾಷ್ಟ್ರ ನಿರ್ಮಾಣದ ಬಗ್ಗೆ ನಮ್ಮ ಸಾಮೂಹಿಕ ಸಂಕಲ್ಪವನ್ನು ಬಲಪಡಿಸುತ್ತವೆ,

ನಾವು ವಂದೇ ಮಾತರಂನ 150 ನೇ ವಾರ್ಷಿಕೋತ್ಸವವನ್ನು ಆಚರಿಸುತ್ತಿರುವ ಸಮಯ ಇದು. ವಂದೇ ಮಾತರಂ ಮೂಲಕ, ಅವರು ಸ್ವಾತಂತ್ರ್ಯ ಚಳವಳಿ ಮತ್ತು ನಮ್ಮ ರಾಷ್ಟ್ರಕ್ಕೆ ಅದರ ಅತ್ಯಂತ ಶಾಶ್ವತ ಸ್ಫೂರ್ತಿಗಳಲ್ಲಿ ಒಂದನ್ನು ಉಡುಗೊರೆಯಾಗಿ ನೀಡಿದರು.

মহান বঙ্কিম চন্দ্র চট্টোপাধ্যায়ের জয়ন্তীতে তাঁর প্রতি শ্রদ্ধাঞ্জলি।

এক সুবিশাল সাহিত্যিক আলোকবর্তিকা হিসেবে, তাঁর লেখা প্রজন্মান্তরের ভারতীয়দের মধ্যে দেশপ্রেম এবং সাংস্কৃতিক গৌরবের চেতনা জাগ্রত করেছিল। তাঁর সমৃদ্ধ সাহিত্যকর্ম মনকে উদ্ভাসিত করে চলেছে এবং জাতি গঠনের প্রতি আমাদের সম্মিলিত সংকল্পকে শক্তিশালী করছে।

এখন আমরা বন্দে মাতরমের ১৫০তম বার্ষিকী উদযাপন করছি। বন্দে মাতরমের মাধ্যমে, তিনি স্বাধীনতা আন্দোলন এবং আমাদের জাতিকে অন্যতম দীর্ঘস্থায়ী অনুপ্রেরণা উপহার দিয়েছিলেন।

 

*****