ಪಿಎಂಇಂಡಿಯಾ
ಬಿಹಾರದ ಲಖಿಸರೈನಲ್ಲಿ ಸಂಭವಿಸಿದ ಕಾಲ್ತುಳಿತದಲ್ಲಿ ಉಂಟಾದ ಜೀವಹಾನಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ತೀವ್ರ ದುಃಖ ವ್ಯಕ್ತಪಡಿಸಿದ್ದಾರೆ.
ದುಃಖದ ಈ ಘಳಿಗೆಯಲ್ಲಿ ಮೃತರ ಕುಟುಂಬಗಳೊಂದಿಗೆ ತಮ್ಮ ಆಲೋಚನೆಗಳು ಇರುತ್ತವೆ ಮತ್ತು ಗಾಯಾಳುಗಳು ಬೇಗನೆ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಪ್ರಧಾನಮಂತ್ರಿಯವರು ಹೇಳಿದ್ದಾರೆ. ಸ್ಥಳೀಯ ಆಡಳಿತವು ಸಂತ್ರಸ್ತರಿಗೆ ಸಕ್ರಿಯವಾಗಿ ಸಹಾಯ ಮಾಡುತ್ತಿದೆ ಎಂದು ಅವರು ಹೇಳಿದರು.
ಎಕ್ಸ್ ತಾಣದಲ್ಲಿ ಎಂದು ಪ್ರಧಾನಮಂತ್ರಿಯವರು ಈ ರೀತಿ ಬರೆದಿದ್ದಾರೆ:
“ಬಿಹಾರದ ಲಖಿಸರೈನಲ್ಲಿ ಘಟಿಸಿದ ಕಾಲ್ತುಳಿತದಲ್ಲಿ ಸಂಭವಿಸಿದ ಜೀವಹಾನಿಯಿಂದ ದುಃಖಿತನಾಗಿದ್ದೇನೆ. ಈ ದುಃಖದ ಘಳಿಗೆಯಲ್ಲಿ ಮೃತರ ಕುಟುಂಬಗಳೊಂದಿಗೆ ನನ್ನ ಆಲೋಚನೆಗಳು ಇವೆ. ಗಾಯಾಳುಗಳು ಆದಷ್ಟು ಬೇಗ ಚೇತರಿಸಿಕೊಳ್ಳಲಿ. ಸ್ಥಳೀಯ ಆಡಳಿತವು ಪೀಡಿತರಿಗೆ ಸಹಾಯ ಮಾಡುತ್ತಿದೆ.”
*****
Pained by the loss of lives due to a stampede in Lakhisarai, Bihar. My thoughts are with the bereaved families in this hour of grief. May the injured recover at the earliest. The local administration is assisting those affected: PM @narendramodi
— PMO India (@PMOIndia) August 17, 2026