Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಭಾರತದ ಸಮಗ್ರ ಅಭಿವೃದ್ಧಿ ಪಯಣವನ್ನು ಪ್ರಮುಖವಾಗಿ ಬಿಂಬಿಸುವ ಲೇಖನವನ್ನು ಹಂಚಿಕೊಂಡ ಪ್ರಧಾನಮಂತ್ರಿ


ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಭಾರತದ ಅಭಿವೃದ್ಧಿ ಪಯಣವು ಕೇಳದ, ಕಾಣದ ಅಥವಾ ವಂಚಿತರನ್ನು ಹೇಗೆ ಮುಖ್ಯವಾಹಿನಿಗೆ ತರುತ್ತಿದೆ ಎಂಬುದನ್ನು ಪ್ರಮುಖವಾಗಿ ಬಿಂಬಿಸುವ ಮಾಜಿ ರಾಷ್ಟ್ರಪತಿ ಶ್ರೀ ರಾಮ್ ನಾಥ್ ಕೋವಿಂದ್ ಅವರ ಲೇಖನವನ್ನು ಹಂಚಿಕೊಂಡಿದ್ದಾರೆ.

‘ಸಬ್ ಕಾ ಸಾಥ್, ಸಬ್ ಕಾ ವಿಕಾಸ್’ ಎಂಬ ಮಂತ್ರಕ್ಕೆ ಪ್ರಧಾನಮಂತ್ರಿಯವರು ಹೆಚ್ಚಿನ ಒತ್ತು ನೀಡುತ್ತಿರುವುದರ ಮೇಲೆ  ಗಮನ ಸೆಳೆದಿರುವ ಶ್ರೀ ಕೋವಿಂದ್ ಅವರು ಪರಿಧಿಯು ಈಗ ಭಾರತದ ಅಭಿವೃದ್ಧಿ ಮಹತ್ವಾಕಾಂಕ್ಷೆಯ ಕೇಂದ್ರಭಾಗದತ್ತ ಚಲಿಸುತ್ತಿದೆ ಎಂದು ಉಲ್ಲೇಖಿಸಿದ್ದಾರೆ.

ಪ್ರಧಾನ ಮಂತ್ರಿಗಳ ಕಚೇರಿ ತನ್ನ ‘X’ ಪೋಸ್ಟ್ ನಲ್ಲಿ:

“ಮಾಜಿ ರಾಷ್ಟ್ರಪತಿ ಶ್ರೀ ರಾಮನಾಥ್ ಕೋವಿಂದ್ @ramnathkovind ಅವರು ತಮ್ಮ ಲೇಖನದಲ್ಲಿ ಭಾರತದ ಅಭಿವೃದ್ಧಿ ಕಥೆಯು ಕೇಳದ, ಕಾಣದ ಅಥವಾ ವಂಚಿತರನ್ನು ಹೆಚ್ಚಾಗಿ ಮುಖ್ಯವಾಹಿನಿಗೆ ತರುತ್ತಿದೆ ಎಂದು ಬರೆದಿದ್ದಾರೆ.

ಪ್ರಧಾನಮಂತ್ರಿ @narendramodi ಅವರು ಸಬ್ ಕಾ ಸಾಥ್, ಸಬ್ ಕಾ ವಿಕಾಸ್ ಹೆಚ್ಚಿನ ಗಮನಹರಿಸಿರುವುದನ್ನು ಅವರು ಪ್ರಮುಖವಾಗಿ ಪ್ರಸ್ತಾಪಿಸಿದ್ದಾರೆ ಮತ್ತು ಪರಿಧಿಯು ಈಗ ಭಾರತದ ಅಭಿವೃದ್ಧಿ ಮಹತ್ವಾಕಾಂಕ್ಷೆಯ ಕೇಂದ್ರಕ್ಕೆ ಚಲಿಸುತ್ತಿದೆ.’’

 

*****