ಪಿಎಂಇಂಡಿಯಾ
ಭಾರತ ಬಿಟ್ಟು ತೊಲಗಿ ಐತಿಹಾಸಿಕ ಚಳವಳಿಯಲ್ಲಿ ಭಾಗವಹಿಸಿದ ಎಲ್ಲರನ್ನೂ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಸ್ಮರಿಸಿದ್ದಾರೆ ಮತ್ತು ಭಾರತದ ಸ್ವಾತಂತ್ರ್ಯ ಹೋರಾಟದಲ್ಲಿ ಅವರ ಶೌರ್ಯ ಮತ್ತು ದೃಢಸಂಕಲ್ಪಕ್ಕೆ ಗೌರವ ಸಮರ್ಪಿಸಿದ್ದಾರೆ. ಮಹಾತ್ಮಾ ಗಾಂಧಿಯವರ ನಾಯಕತ್ವದಿಂದ ಪ್ರೇರಿತವಾದ ಭಾರತ ಬಿಟ್ಟು ತೊಲಗಿ ಚಳವಳಿಯ ಕರೆಯು ಸ್ವಾತಂತ್ರ್ಯ ಹೋರಾಟಕ್ಕೆ ಹೊಸ ಚೈತನ್ಯ ತುಂಬಿತು ಮತ್ತು ವಸಾಹತುಶಾಹಿ ಆಳ್ವಿಕೆಯನ್ನು ತೊಡೆದು ಹಾಕಲು ಭಾರತದ ಜನರ ಅಚಲ ಸಂಕಲ್ಪವನ್ನು ಪ್ರತಿಬಿಂಬಿಸಿತ್ತು ಎಂದು ಶ್ರೀ ಮೋದಿ ಅವರು ಹೇಳಿದ್ದಾರೆ.
ಪ್ರಧಾನಮಂತ್ರಿಗಳು ಎಕ್ಸ್ ನಲ್ಲಿ ಹೀಗೆ ಪೋಸ್ಟ್ ಮಾಡಿದ್ದಾರೆ:
ಐತಿಹಾಸಿಕ ಭಾರತ ಬಿಟ್ಟು ತೊಲಗಿ ಚಳವಳಿಯಲ್ಲಿ ಭಾಗವಹಿಸಿದ ಎಲ್ಲರನ್ನು ಸ್ಮರಿಸುತ್ತಿದ್ದೇನೆ. ಅವರ ಸ್ಥೈರ್ಯ ಪ್ರತಿಯೊಬ್ಬ ಭಾರತೀಯನಿಗೂ ಸದಾ ಸ್ಫೂರ್ತಿಯ ಸೆಲೆಯಾಗಿರಲಿದೆ. ಮಹಾತ್ಮಾ ಗಾಂಧಿಯವರ ನಾಯಕತ್ವದಿಂದ ಪ್ರೇರಿತವಾದ ಭಾರತ ಬಿಟ್ಟು ತೊಲಗಿ ಎಂಬ ಘೋಷಣೆಯು ನಮ್ಮ ಸ್ವಾತಂತ್ರ್ಯ ಹೋರಾಟಕ್ಕೆ ಹೊಸ ಚೈತನ್ಯವನ್ನು ತುಂಬಿತು ಮತ್ತು ವಸಾಹತುಶಾಹಿ ಆಳ್ವಿಕೆಯಿಂದ ಮುಕ್ತರಾಗಲು ನಮ್ಮ ಜನರ ಅಚಲ ದೃಢಸಂಕಲ್ಪವನ್ನು ಪ್ರತಿಬಿಂಬಿಸಿತು.
*****
Remembering all those who participated in the historic Quit India Movement. Their courage will always remain an inspiration for every Indian. Inspired by the leadership of Mahatma Gandhi Ji, the clarion call of Quit India infused new energy into our freedom struggle and reflected…
— Narendra Modi (@narendramodi) August 9, 2026