ಪಿಎಂಇಂಡಿಯಾ
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿಂದು ನಡೆದ ಕೇಂದ್ರ ಸಚಿವ ಸಂಪುಟ ಸಭೆ, ಭಾರತ ಮತ್ತು ಆಫ್ಘಾನಿಸ್ತಾನದ ನಡುವೆ (ಅಪರಾಧಿಗಳ ಹಸ್ತಾಂತರ) ಪ್ರತ್ಯರ್ಪಣ ಒಪ್ಪಂದಕ್ಕೆ ಅಂಕಿತ ಹಾಕಲು ಮತ್ತು ಅದನ್ನು ಸ್ಥಿರೀಕರಿಸಲು ತನ್ನ ಅನುಮೋದನೆ ನೀಡಿದೆ.
ಈ ಒಪ್ಪಂದವು ಭಯೋತ್ಪಾದಕರು, ಆರ್ಥಿಕ ಅಪರಾಧಿಗಳು ಮತ್ತು ಇತರ ಕ್ರಿಮಿನಲ್ ಅಪರಾಧಿಗಳನ್ನು ಆಫ್ಘಾನಿಸ್ತಾನದಿಂದ ಮತ್ತು ಆಫ್ಘಾನಿಸ್ತಾನಕ್ಕೆ ಹಸ್ತಾಂತರಿಸಲು ಕಾನೂನಿನ ಚೌಕಟ್ಟು ಒದಗಿಸಲಿದೆ.
AKT/VBA/AK