Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಮಧ್ಯಪ್ರದೇಶದ ಅಗರ್ ಮಾಲ್ವಾದಲ್ಲಿ ಸಂಭವಿಸಿದ ದುರಂತದಲ್ಲಿ ಜೀವಹಾನಿಗೆ ಪ್ರಧಾನಮಂತ್ರಿ ಸಂತಾಪ


ಮಧ್ಯಪ್ರದೇಶದ ಅಗರ್ ಮಾಲ್ವಾದಲ್ಲಿ ಸಂಭವಿಸಿದ ದುರ್ಘಟನೆಯಲ್ಲಿ ಜೀವಹಾನಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಸಂತಾಪ ಸೂಚಿಸಿದ್ದಾರೆ.

ಪ್ರಧಾನಮಂತ್ರಿಗಳು ಮೃತರ ವಾರಸುದಾರರಿಗೆ ಪ್ರಧಾನಮಂತ್ರಿ ರಾಷ್ಟ್ರೀಯ ಪರಿಹಾರ ನಿಧಿ (ಪಿ ಎಂ ಎನ್‌ ಆರ್‌ ಎಫ್) ನಿಂದ ತಲಾ 2 ಲಕ್ಷ ರೂಪಾಯಿಗಳ ಪರಿಹಾರ ಹಾಗೂ ಗಾಯಗೊಂಡವರಿಗೆ ತಲಾ 50,000 ರೂಪಾಯಿ ಪರಿಹಾರ ಘೋಷಿಸಿದ್ದಾರೆ.

ಶ್ರೀ ಮೋದಿ ಅವರು ಎಕ್ಸ್ ನಲ್ಲಿ ಹೀಗೆ ಪೋಸ್ಟ್ ಮಾಡಿದ್ದಾರೆ: 

ಮಧ್ಯಪ್ರದೇಶದ ಅಗರ್ ಮಾಲ್ವಾದಲ್ಲಿ ಸಂಭವಿಸಿದ ದುರ್ಘಟನೆಯು ಅತ್ಯಂತ ನೋವಿನ ಸಂಗತಿ. ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡವರಿಗೆ ನನ್ನ ಸಂತಾಪಗಳು.

ಮೃತರ ವಾರಸುದಾರರಿಗೆ ಪಿ ಎಂ ಎನ್‌ ಆರ್‌ ಎಫ್‌ ನಿಂದ ತಲಾ 2 ಲಕ್ಷ ರೂಪಾಯಿಗಳ ಪರಿಹಾರ ಧನ ನೀಡಲಾಗುವುದು. ಗಾಯಗೊಂಡವರಿಗೆ ತಲಾ 50,000 ರೂಪಾಯಿ ನೀಡಲಾಗುವುದು: ಪ್ರಧಾನಮಂತ್ರಿ @narendramodi

 

*****