Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಮೂಲಸೌಕರ್ಯ ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಿದ ಪ್ರಧಾನಿ, ಮೋಕಾಮಾದಲ್ಲಿ ಸಾರ್ವಜನಿಕ ಸಭೆ ಉದ್ದೇಶಿಸಿ ಭಾಷಣ


ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು, ಬಿಹಾರದ ಮೋಕಾಮಾದಲ್ಲಿ ನಮಾಮಿ ಗಂಗೆ ಕಾರ್ಯಕ್ರಮದ ಅಡಿಯಲ್ಲಿ ನಾಲ್ಕು ಒಳಚರಂಡಿ; ಮತ್ತು ನಾಲ್ಕು ರಾಷ್ಟ್ರೀಯ ಹೆದ್ದಾರಿ ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಿದರು. ಈ ಯೋಜನೆಗಳ ಒಟ್ಟು ಅಂದಾಜು 3700 ಕೋಟಿ  ರೂಪಾಯಿ ಆಗಿದೆ. 
ಬೃಹತ್ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ, ಶ್ರೇಷ್ಠ ಕವಿ, ರಾಮಧಾರಿ ಸಿಂಗ್ ದಿನಕರ್ ಅವರು ನಿಕಟ ಸಂಪರ್ಕ ಹೊಂದಿದ್ದ ನಾಡಿಗೆ ಆಗಮಿಸಿರುವುದಕ್ಕೆ ತಮಗೆ ಅತೀವ ಸಂತಸವಾಗಿದೆ ಎಂದರು. ಬಿಹಾರದ ಅಭಿವೃದ್ಧಿಗಾಗಿ ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರಗಳೆರಡೂ ಏನೇನು ಸಾಧ್ಯವೋ ಅದೆಲ್ಲವನ್ನೂ ಮಾಡಲಿವೆ ಎಂದು ಪ್ರತಿಯೊಬ್ಬರಿಗೂ ಭರವಸೆ ನೀಡಿದರು. 
ಸರ್ಕಾರ ಜನರ ಆಶೋತ್ತರಗಳನ್ನು ಈಡೇರಿಸಲು ಅವಿಶ್ರಾಂತವಾಗಿ ಶ್ರಮಿಸುತ್ತಿದೆ ಎಂದು ಪ್ರಧಾನಿ ಹೇಳಿದರು. ಇಂದು ಶಂಕುಸ್ಥಾಪನೆ ನೆರವೇರಿಸಲಾದ ಯೋಜನೆಗಳು ಬಿಹಾರದ ಅಭಿವೃದ್ಧಿಗೆ ಇಂಬು ನೀಡಲಿವೆ ಎಂದು ಹೇಳಿದರು.

ರಸ್ತೆ ನಿರ್ಮಾಣದ ವೇಗವನ್ನು ಹೆಚ್ಚಿಸಲು ಸರ್ಕಾರ ಗಮನಹರಿಸಿದೆ. ನಮಾಮಿ ಗಂಗೆ ಕಾರ್ಯಕ್ರಮ ಗಂಗಾನದಿಯನ್ನು ಸಂರಕ್ಷಿಸಲು ನೆರವಾಗಲಿದೆ ಎಂದು ಹೇಳಿದರು. 

ಇತ್ತೀಚೆಗೆ ಆರಂಭಿಸಲಾದ ಅಂತ್ಯೋದಯ ಎಕ್ಸ್ ಪ್ರೆಸ್ ಪ್ರಸ್ತಾಪಿಸಿದ ಪ್ರಧಾನಿ, ಇದು ಬಿಹಾರ್, ಪೂರ್ವ ಭಾರತ ಮತ್ತು ದೇಶದ ಇತರ ಭಾಗಗಳನ್ನು ಸಂಪರ್ಕಿಸಲಿದೆ ಎಂದರು. ಉತ್ತಮ ಸಂಪರ್ಕ ಹೆಚ್ಚಿನ ಅಭಿವೃದ್ಧಿಗೆ ಇಂಬು ನೀಡಲಿದೆ ಎಂದು ಹೇಳಿದ ಪ್ರಧಾನಿ, ರಸ್ತೆ, ರೈಲು ಮತ್ತು ಜಲ ಮಾರ್ಗಗಳಿಗೆ ಒತ್ತು ನೀಡಲಾಗಿದೆ ಎಂದರು. 

ಇಂದು ಶಂಕುಸ್ಥಾಪನೆ ನೆರವೇರಿಸಲಾದ ನಾಲ್ಕು ರಾಷ್ಟ್ರೀಯ ಹೆದ್ದಾರಿ ಯೋಜನೆಗಳು ಈ ಕೆಳಕಂಡವುಗಳನ್ನು ಒಳಗೊಂಡಿವೆ:

  •  ಔಂತ – ಸಿಮರಿಯಾ ವಿಭಾಗದ ರಾ.ಹೆ 31ರಲ್ಲಿನಾಲ್ಕು ಪಥಮತ್ತು ಷಟ್ ಪಥದ ಗಂಗಾ ಸೇತು ನಿರ್ಮಾಣ.
  •   ರಾ.ಹೆ.. 31ರ ಭಕ್ತಿಯಾಪುರ್ – ಮೋಕಾಮಾ ವಿಭಾಗದಲ್ಲಿ ಚತುಷ್ಪಥ ನಿರ್ಮಾಣ    
  •       ರಾ.ಹೆ.107ರ ಮಹೇಶ್ಕುಂತ್ – ಸಹಸ್ರಾ – ಪುರ್ನಿಯಾ ವಿಭಾಗದಲ್ಲಿ ದ್ವಿಪಥ ನಿರ್ಮಾಣ.
  •       ರಾ.ಹೆ.82ರ ಬಿಹಾರ್ ಷರೀಫ್ – ಬರ್ಬಿಗಾ – ಮೋಕಾಮಾ ವಿಭಾಗದಲ್ಲಿ ದ್ವಿಪಥ ನಿರ್ಮಾಣ.

ನಾಲ್ಕು ಒಳಚರಂಡಿ ಯೋಜನೆಗಳಲ್ಲಿ ಬೇವೂರ್ ತ್ಯಾಜ್ಯ ಜಲ ಶುದ್ಧೀಕರಣ ಘಟಕ, ಬೇವೂರಿನಲ್ಲಿ ಒಳಚರಂಡಿ ಜಾಲ ಸೇರಿದಂತೆ  ಒಳಚರಂಡಿ ವ್ಯವಸ್ಥೆ,ಕರ್ಮಲಿಚಕ್ ತ್ಯಾಜ್ಯ ಜಲ ಸಂಸ್ಕರಣಾ ಘಟಕ ಮತ್ತು ಎಸ್.ಟಿ.ಪಿ. ಮತ್ತು ಸೈದ್ ಪುರದ ಒಳಚರಂಡಿ ಜಾಲವೂ ಸೇರಿದೆ. ಈ ಯೋಜನೆಗಳು ಒಟ್ಟಾರೆಯಾಗಿ 120 ಎಂ.ಎಲ್.ಡಿ. ಸಾಮರ್ಥ್ಯದ ಹೊಸ ಎಸ್.ಟಿ.ಪಿ. ರೂಪಿಸಲಿದೆ ಮತ್ತು ಹಾಲಿ ಬೇವೂರಿನ 20 ಎಂ.ಎಲ್.ಡಿ.ಯನ್ನು ಮೇಲ್ದರ್ಜೆಗೇರಿಸಲಿದೆ.

***