ಪಿಎಂಇಂಡಿಯಾ
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಯುನೈಟೆಡ್ ಅರಬ್ ಎಮಿರೇಟ್ಸ್ ಅಧ್ಯಕ್ಷರಾದ ಗೌರವಾನ್ವಿತ ಶೇಖ್ ಮೊಹಮ್ಮದ್ ಬಿನ್ ಜಾಯೆದ್ ಅಲ್ ನಹ್ಯಾನ್ ಅವರೊಂದಿಗೆ ದೂರವಾಣಿ ಮೂಲಕ ಮಾತುಕತೆ ನಡೆಸಿ ಆರಂಭದಲ್ಲಿಯೇ ಈದ್ ಶುಭಾಶಯಗಳನ್ನು ತಿಳಿಸಿದರು. ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಮತ್ತು ಯುಎಇ ಅಧ್ಯಕ್ಷರು ಪಶ್ಚಿಮ ಏಷ್ಯಾದ ಪ್ರಸ್ತುತ ಪರಿಸ್ಥಿತಿಯ ಕುರಿತು ಚರ್ಚಿಸಿದರು. ಯುಎಇ ಮೇಲೆ ನಡೆದ ದಾಳಿಗಳಿಂದ ಅಮಾಯಕ ಜನರ ಪ್ರಾಣ ಹಾನಿ ಮತ್ತು ನಾಗರಿಕ ಮೂಲಸೌಕರ್ಯಗಳ ಮೇಲೆ ಉಂಟಾದ ಹಾನಿಯನ್ನು ಭಾರತವು ತೀವ್ರವಾಗಿ ಖಂಡಿಸುತ್ತದೆ ಎಂದು ಪ್ರಧಾನಮಂತ್ರಿ ಪುನರುಚ್ಚರಿಸಿದರು.
ಹಾರ್ಮುಝ್ ಜಲಸಂಧಿಯ ಮೂಲಕ ಸುರಕ್ಷಿತ ಹಾಗೂ ಮುಕ್ತ ಸಮುದ್ರಯಾನವನ್ನು ಖಚಿತಪಡಿಸುವ ಮಹತ್ವದ ಬಗ್ಗೆ ಪ್ರಧಾನಮಂತ್ರಿ ಮತ್ತು ಯುಎಇ ಅಧ್ಯಕ್ಷರು ಒಪ್ಪಿಕೊಂಡರು. ಈ ಪ್ರದೇಶದಲ್ಲಿ ಶೀಘ್ರದಲ್ಲೇ ಶಾಂತಿ, ಭದ್ರತೆ ಮತ್ತು ಸ್ಥಿರತೆಯನ್ನು ಪುನಃಸ್ಥಾಪಿಸಲು ಎರಡೂ ದೇಶಗಳು ಒಟ್ಟಾಗಿ ಕಾರ್ಯನಿರ್ವಹಿಸುವುದಾಗಿ ಉಭಯ ನಾಯಕರು ಭರವಸೆ ನೀಡಿದರು.
ಪ್ರಧಾನಮಂತ್ರಿಗಳು ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿ ಹೀಗೆ ಬರೆದಿದ್ದಾರೆ:
“ನನ್ನ ಸಹೋದರರಾದ ಯುಎಇ ಅಧ್ಯಕ್ಷರಾದ ಗೌರವಾನ್ವಿತ ಶೇಖ್ ಮೊಹಮ್ಮದ್ ಬಿನ್ ಜಾಯೆದ್ ಅಲ್ ನಹ್ಯಾನ್ ಅವರೊಂದಿಗೆ ಮಾತುಕತೆ ನಡೆಸಿ, ಮೊದಲೇ ಈದ್ ಶುಭಾಶಯಗಳನ್ನು ತಿಳಿಸಿದೆನು.
ನಾವು ಪಶ್ಚಿಮ ಏಷ್ಯಾದ ಪ್ರಸ್ತುತ ಪರಿಸ್ಥಿತಿಯ ಕುರಿತು ಚರ್ಚಿಸಿದೆವು. ಅಮಾಯಕ ಜನರ ಜೀವಹಾನಿ ಮತ್ತು ನಾಗರಿಕ ಮೂಲಸೌಕರ್ಯಗಳಿಗೆ ಹಾನಿ ಉಂಟುಮಾಡಿದ ಯುಎಇ ಮೇಲಿನ ಎಲ್ಲಾ ದಾಳಿಗಳನ್ನು ಭಾರತವು ತೀವ್ರವಾಗಿ ಖಂಡಿಸುತ್ತದೆ ಎಂದು ಪುನರುಚ್ಚರಿಸಿದೆವು.
ಹಾರ್ಮುಝ್ ಜಲಸಂಧಿಯ ಮೂಲಕ ಸುರಕ್ಷಿತ ಮತ್ತು ಮುಕ್ತ ಸಮುದ್ರಯಾನವನ್ನು ಖಚಿತಪಡಿಸುವ ಮಹತ್ವದ ಬಗ್ಗೆ ನಾವು ಒಪ್ಪಿಕೊಂಡೆವು. ಪ್ರದೇಶದಲ್ಲಿ ಶಾಂತಿ, ಭದ್ರತೆ ಮತ್ತು ಸ್ಥಿರತೆಯನ್ನು ಶೀಘ್ರದಲ್ಲೇ ಪುನಃಸ್ಥಾಪಿಸಲು ನಾವು ಮುಂದುವರಿದು ಒಟ್ಟಾಗಿ ಕೆಲಸ ಮಾಡುತ್ತೇವೆ.”
*****
Spoke with my brother HH Sheikh Mohamed bin Zayed Al Nahyan, President of the UAE and conveyed advance Eid greetings.
— Narendra Modi (@narendramodi) March 17, 2026
We discussed the current situation in West Asia. Reiterated India’s strong condemnation of all attacks on the UAE that have resulted in loss of innocent lives…