Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ವಿಶ್ವ ಸಂಸ್ಕೃತ ದಿನದಂದು ಶುಭಾಶಯಗಳನ್ನು ಕೋರಿದ ಪ್ರಧಾನಮಂತ್ರಿ


ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಶ್ರಾವಣ ಪೂರ್ಣಿಮೆಯ ವಿಶ್ವ ಸಂಸ್ಕೃತ ದಿನದಂದು ಆತ್ಮೀಯ ಶುಭಾಶಯಗಳನ್ನು ಕೋರಿದ್ದಾರೆ. ಭಾರತದ ಜ್ಞಾನ, ಚಿಂತನೆ ಮತ್ತು ಸೃಜನಶೀಲತೆಯ ನಿರಂತರ ವಾಹಕವಾಗಿರುವ ಸಂಸ್ಕೃತದ ಸಾರ್ವಕಾಲಿಕ ಶ್ರೀಮಂತಿಕೆಯನ್ನು ನಾವು ಆಚರಿಸುತ್ತೇವೆ ಎಂದು ಶ್ರೀ ನರೇಂದ್ರ ಮೋದಿ ಹೇಳಿದರು. “ಈ ವಿಶೇಷ ದಿನದಂದು ಭಾರತ ಮತ್ತು ವಿಶ್ವದಾದ್ಯಂತ ಸಂಸ್ಕೃತವನ್ನು ಅಧ್ಯಯನ ಮಾಡುವ ಮತ್ತು ಕಲಿಸುವ ಮತ್ತು ಆ ಭಾಷೆಯಲ್ಲಿ ಹುದುಗಿರುವ ಸಾರ್ವಕಾಲಿಕ ಜ್ಞಾನ ಭಂಡಾರವನ್ನು ಭವಿಷ್ಯದ ಪೀಳಿಗೆಗೆ ತಿಳಿಸಲು ಶ್ರಮಿಸುತ್ತಿರುವ ಎಲ್ಲರನ್ನೂ ನಾನು ಶ್ಲಾಘಿಸುತ್ತೇನೆ’’ ಎಂದು ಶ್ರೀ ನರೇಂದ್ರ ಮೋದಿ ಹೇಳಿದರು.

ಪ್ರಧಾನಮಂತ್ರಿ ತಮ್ಮ  X ಪೋಸ್ಟ್ ನಲ್ಲಿ  ಹೀಗೆ ಹೇಳಿದ್ದಾರೆ

विश्वसंस्कृतदिवसस्य शुभाशयाः।

अद्य, श्रावणपूर्णिमादिने, वयं संस्कृतस्य चिरन्तन-समृद्धेः उत्सवम् आचरामः। एषा भाषा भारतस्य ज्ञानस्य, चिन्तनस्य, सर्जनशीलतायाः च निरन्तर-संवाहिका आसीत्। तस्याः सकारात्मकः प्रभावः बहुषु क्षेत्रेषु अद्यापि द्रष्टुं शक्यते।

एतस्मिन् विशिष्टे दिने, भारते विश्वे च ये संस्कृतं पठन्ति, पाठयन्ति तथा च एतस्यां निहितं कालातीतं निधिं अग्रिमसन्तत्यै प्रापयितुं प्रयत्नशीलाः सन्ति तान् सर्वान् वयं प्रशंसामः।

 

*****