ಪಿಎಂಇಂಡಿಯಾ
ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಶ್ರೀಮದ್ ಸುಧೀಂದ್ರ ತೀರ್ಥ ಸ್ವಾಮೀಜಿಯವರ ಜನ್ಮಶತಮಾನೋತ್ಸವದ ವಿಶೇಷ ಸಂದರ್ಭದಲ್ಲಿ ಅವರಿಗೆ ಇಂದು ಗೌರವ ನಮನ ಸಲ್ಲಿಸಿದ್ದಾರೆ. ಶ್ರೀಮದ್ ಸುಧೀಂದ್ರ ತೀರ್ಥ ಸ್ವಾಮೀಜಿ ಅವರು ಸೇವೆ ಮತ್ತು ಆಧ್ಯಾತ್ಮಿಕತೆಗೆ ತಮ್ಮನ್ನು ತಾವು ಅರ್ಪಿಸಿಕೊಂಡು ಸಮಾಜದ ಮೇಲೆ ಶಾಶ್ವತ ಪ್ರಭಾವ ಬೀರಿದ್ದಾರೆ ಎಂದು ಶ್ರೀ ಮೋದಿ ಅವರು ಸ್ಮರಿಸಿದ್ದಾರೆ. ಪೂಜ್ಯ ಸ್ವಾಮಿಗಳು ಅನೇಕ ಸಂಸ್ಥೆಗಳು ಮತ್ತು ಸಂಶೋಧನಾ ಕೇಂದ್ರಗಳನ್ನು ಸ್ಥಾಪಿಸಿದರು ಮತ್ತು ಜನರಲ್ಲಿ ಶಿಕ್ಷಣದ ಆನಂದ ಪಸರಿಸಲು ಬಹುವಾಗಿ ಬದ್ಧರಾಗಿದ್ದರು ಎಂದು ಅವರು ವಿವರಿಸಿದ್ದಾರೆ.
ಪ್ರಧಾನಮಂತ್ರಿಗಳು ಎಕ್ಸ್ ನಲ್ಲಿ ಹೀಗೆ ಪೋಸ್ಟ್ ಮಾಡಿದ್ದಾರೆ:
“ವಾರಾಣಸಿಯ ಶ್ರೀ ಕಾಶಿ ಮಠ ಸಂಸ್ಥಾನದ ಶ್ರೀಮದ್ ಸುಧೀಂದ್ರ ತೀರ್ಥ ಸ್ವಾಮೀಜಿಯವರ ಜನ್ಮಶತಮಾನೋತ್ಸವದ ವಿಶೇಷ ಸಂದರ್ಭದಲ್ಲಿ ಅವರಿಗೆ ಗೌರವ ನಮನಗಳು. ಸೇವೆ ಮತ್ತು ಆಧ್ಯಾತ್ಮಿಕತೆಗಾಗಿ ಅವರು ತಮ್ಮ ಜೀವನವನ್ನು ಮುಡಿಪಾಗಿಟ್ಟಿದ್ದರು. ಅವರು ಅನೇಕ ಸಂಸ್ಥೆಗಳು, ಸಂಶೋಧನಾ ಕೇಂದ್ರಗಳನ್ನು ಸ್ಥಾಪಿಸಿದರು ಮತ್ತು ಜನರಲ್ಲಿ ಶಿಕ್ಷಣದ ಆನಂದ ಪಸರಿಸಲು ಉತ್ಸುಕರಾಗಿದ್ದರು. ಅವರ ಬೋಧನೆಗಳು ಸರಳತೆ, ಕರುಣೆ ಮತ್ತು ಸದಾಚಾರವನ್ನು ಒತ್ತಿಹೇಳುತ್ತವೆ. ನಮ್ಮ ನೆಲದಲ್ಲಿ ಹುಟ್ಟಿದ ಭಾರತದ ಸಂಸ್ಕೃತಿ ಮತ್ತು ಮೌಲ್ಯ ವ್ಯವಸ್ಥೆಗಳನ್ನು ಸಂರಕ್ಷಿಸಲು ಮತ್ತು ಜನಪ್ರಿಯಗೊಳಿಸಲು ಅವರು ಮಾಡಿರುವ ಪ್ರಯತ್ನಗಳು ಕೂಡ ಅಷ್ಟೇ ಶ್ಲಾಘನೀಯ.”
*****
On the special occasion of his birth centenary, paying homage to Srimad Sudhindra Tirtha Swamiji of the Shri Kashi Math Samsthan, Varanasi. He devoted his life towards service and spirituality. He set up numerous institutions, research centres and was passionate about spreading…
— Narendra Modi (@narendramodi) March 31, 2026