Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಶ್ರೀಲಂಕಾ ಅಧ್ಯಕ್ಷರೊಂದಿಗೆ ಪ್ರಧಾನಮಂತ್ರಿ ಸಭೆ

ಶ್ರೀಲಂಕಾ ಅಧ್ಯಕ್ಷರೊಂದಿಗೆ ಪ್ರಧಾನಮಂತ್ರಿ ಸಭೆ


ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ನವದೆಹಲಿಯಲ್ಲಿ ಭಾರತ-AI ಇಂಪ್ಯಾಕ್ಟ್ ಶೃಂಗಸಭೆಯಲ್ಲಿ ಭಾಗವಹಿಸಲು ಭಾರತಕ್ಕೆ ಭೇಟಿ ನೀಡಿರುವ ಶ್ರೀಲಂಕಾ ಅಧ್ಯಕ್ಷ ಗೌರವಾನ್ವಿತ ಅನುರ ಕುಮಾರ ದಿಸಾನಾಯಕ ಅವರನ್ನು ಭೇಟಿ ಮಾಡಿದರು. ಡಿಸೆಂಬರ್ 2024 ರಲ್ಲಿ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ನಂತರ ಅಧ್ಯಕ್ಷ ದಿಸಾನಾಯಕ ಅವರು ಭಾರತಕ್ಕೆ ನೀಡಿದ ಎರಡನೇ ಭೇಟಿ ಇದಾಗಿದೆ.

ಏಪ್ರಿಲ್ 2025 ರಲ್ಲಿ ಪ್ರಧಾನಮಂತ್ರಿಯವರ ಶ್ರೀಲಂಕಾ ಭೇಟಿ ಸೇರಿದಂತೆ ಇತ್ತೀಚಿನ ಉನ್ನತ ಮಟ್ಟದ ಭೇಟಿಗಳಿಂದ ಬಂದ ದ್ವಿಪಕ್ಷೀಯ ಉಪಕ್ರಮಗಳಲ್ಲಿನ ಪ್ರಗತಿಯ ಬಗ್ಗೆ ಇಬ್ಬರೂ ನಾಯಕರು ಚರ್ಚಿಸಿದರು. ಭೌತಿಕ, ಡಿಜಿಟಲ್ ಮತ್ತು ಇಂಧನ ಸಂಪರ್ಕದ ಪ್ರಮುಖ ಸ್ತಂಭಗಳಲ್ಲಿ ಸಹಕಾರವನ್ನು ಮತ್ತಷ್ಟು ವೇಗಗೊಳಿಸಲು ಹಂಚಿಕೆಯ ಬದ್ಧತೆಯ ಬಗ್ಗೆ ಉಭಯ ನಾಯಕರು ಸಮಾಲೋಚಿಸಿದರು. ಅಭಿವೃದ್ಧಿ ಗುರಿಗಳ ಪ್ರಗತಿಯಲ್ಲಿ ತಂತ್ರಜ್ಞಾನದ ಪಾತ್ರವನ್ನು ಗುರುತಿಸಿದ ಉಭಯತ್ರರು, ಕೃತಕ ಬುದ್ಧಿಮತ್ತೆಯ ನಿಯೋಜನೆಯಲ್ಲಿ ಒಮ್ಮತದ  ಅಭಿಪ್ರಾಯಗಳನ್ನು ವಿನಿಮಯ ಮಾಡಿಕೊಂಡರು.

ದಿತ್ವಾ ಚಂಡಮಾರುತದ ನಂತರ ಭಾರತ ನೀಡಿದ ತ್ವರಿತ ಮತ್ತು ಬೇಷರತ್ತಾದ ಬೆಂಬಲಕ್ಕಾಗಿ ಅಧ್ಯಕ್ಷ ದಿಸಾನಾಯಕ ಅವರು ಕೃತಜ್ಞತೆಯನ್ನು ವ್ಯಕ್ತಪಡಿಸಿದರು. ಮೊದಲ ಪ್ರತಿಸ್ಪಂದಕರಾಗಿ, ಭಾರತವು ‘ಸಾಗರ್ ಬಂಧು’ ಕಾರ್ಯಾಚರಣೆಯ ಅಡಿಯಲ್ಲಿ ತುರ್ತು ಪರಿಹಾರ ಸಾಮಗ್ರಿಗಳನ್ನು ಒದಗಿಸಿತು ಮತ್ತು  ಮಜ[ಪ೮ಶೋಧ ಮತ್ತು ರಕ್ಷಣಾ ಪ್ರಯತ್ನಗಳನ್ನು ಬೆಂಬಲಿಸಿತು. 450 ಮಿಲಿಯನ್ ಯುಎಸ್ ಡಾಲರ್ ನೆರವು ಪ್ಯಾಕೇಜ್ ಮೂಲಕ ಪುನರ್ನಿರ್ಮಾಣ ಮತ್ತು ಪುನರ್ನಿರ್ಮಾಣಕ್ಕೆ ಭಾರತದ ನಿರಂತರ ಬೆಂಬಲದಲ್ಲಿನ ಪ್ರಗತಿಯನ್ನು ಇಬ್ಬರೂ ನಾಯಕರು ತೃಪ್ತಿಯಿಂದ ಗಮನಿಸಿದರು.

ಶ್ರೀಲಂಕಾದಲ್ಲಿ ಇತ್ತೀಚೆಗೆ ಮುಕ್ತಾಯಗೊಂಡ ಪವಿತ್ರ ದೇವ್ನಿಮೋರಿ ಅವಶೇಷಗಳ ಪ್ರದರ್ಶನದ ಯಶಸ್ಸನ್ನು ಸ್ವಾಗತಿಸಿದ ಇಬ್ಬರು ನಾಯಕರು, ನಾಗರಿಕ ಸಂಪರ್ಕಗಳ ಬಲವು ಭಾರತ-ಶ್ರೀಲಂಕಾ ಸಹಭಾಗಿತ್ವಕ್ಕೆ ಸಾಟಿಯಿಲ್ಲದ ಪ್ರಯೋಜನವನ್ನು ನೀಡುತ್ತದೆ ಎಂದು ಹೇಳಿದರು.

ಶ್ರೀಲಂಕಾದ ಸುಸ್ಥಿರ ಅಭಿವೃದ್ಧಿ ಅಗತ್ಯಗಳನ್ನು ಪೂರೈಸಲು ಮತ್ತು ಹಿಂದೂ ಮಹಾಸಾಗರ ಪ್ರದೇಶದ ಸ್ಥಿರತೆಗೆ ಕೊಡುಗೆ ನೀಡಲು ದ್ವಿಪಕ್ಷೀಯ ಸಹಕಾರವನ್ನು ಮತ್ತಷ್ಟು ಮುನ್ನಡೆಸಲು ಜಂಟಿಯಾಗಿ ಕೆಲಸ ಮಾಡಲು ಉಭಯ ನಾಯಕರು ಒಮ್ಮತ ಅಭಿಪ್ರಾಯ ವ್ಯಕ್ತಪಡಿಸಿದರು.

 

*****