Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಶ್ರೀಶೈಲದಲ್ಲಿ ನಡೆದ ರಾಷ್ಟ್ರೀಯ ಜನ ಜಾಗೃತಿ ಧರ್ಮ ಸಮ್ಮೇಳನ ಉದ್ದೇಶಿಸಿ ವಿಡಿಯೋ ಸಂವಾದದ ಮೂಲಕ ಪ್ರಧಾನಿ ಭಾಷಣ

ಶ್ರೀಶೈಲದಲ್ಲಿ ನಡೆದ ರಾಷ್ಟ್ರೀಯ ಜನ ಜಾಗೃತಿ ಧರ್ಮ ಸಮ್ಮೇಳನ ಉದ್ದೇಶಿಸಿ ವಿಡಿಯೋ ಸಂವಾದದ ಮೂಲಕ ಪ್ರಧಾನಿ ಭಾಷಣ


ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಇಂದು ಶ್ರೀಶೈಲದಲ್ಲಿ ನಡೆದ ರಾಷ್ಟ್ರೀಯ ಜನ ಜಾಗೃತಿ ಧರ್ಮ ಸಮ್ಮೇಳನ ಉದ್ದೇಶಿಸಿ ವಿಡಿಯೋ ಸಂವಾದದ ಮೂಲಕ ಭಾಷಣ ಮಾಡಿದರು. 

 

ಯುಗಾದಿಯ ಸಂದರ್ಭದಲ್ಲಿ ಎಲ್ಲರಿಗೂ ಶುಭಾಶಯ ಸಲ್ಲಿಸಿದ ಪ್ರಧಾನಮಂತ್ರಿ, ಯುಗಾದಿಯು ಹೊಸತರ ಆರಂಭದ ಮತ್ತು ಹೊಸ ವಿಶ್ವಾಸದ ಹಬ್ಬವಾಗಿದೆ ಎಂದರು. ಸರ್ಕಾರ ನಿರ್ದಿಷ್ಟ ಗುರಿ ಮತ್ತು ಕಾಲಮಿತಿಯೊಳಗೆ ವಿವಿಧ ಯೋಜನೆಗಳನ್ನು ಕಾರ್ಯಗತಗೊಳಿಸುತ್ತಿದೆ ಎಂದು ಪ್ರಧಾನಿ ತಿಳಿಸಿದರು. 

 

ಈ ನಿಟ್ಟಿನಲ್ಲಿ ಜನ್ ಧನ್ ಖಾತೆ ತೆರೆಯುವುದು, ಬಡವರಿಗಾಗಿ ವಿಮೆ, ಉಜ್ವಲ ಅಡುಗೆ ಅನಿಲ ಸಂಪರ್ಕ, ಮುದ್ರಾ ಯೋಜನೆ ಮತ್ತು ಪ್ರಧಾನಮಂತ್ರಿ ಆವಾಸ್ ಯೋಜನೆ ಇತ್ಯಾದಿಗಳಲ್ಲಿ ಆಗಿರುವ ಪ್ರಗತಿಯ ಬಗ್ಗೆ ಅವರು ಪ್ರಸ್ತಾಪಿಸಿದರು. 

 

ಮೂಲಸೌಕರ್ಯ ಅಭಿವೃದ್ಧಿಯ ವೇಗ ಗಣನೀಯವಾಗಿ ಹೆಚ್ಚಳವಾಗಿದೆ ಎಂದು ಅವರು ಹೇಳಿದರು. ಆಯುಷ್ಮಾನ್ ಭಾರತ ಮತ್ತು ರಾಷ್ಟ್ರೀಯ ಪೌಷ್ಟಿಕ ಅಭಿಯಾನ ಯೋಜನೆಯ ಪ್ರಸ್ತಾಪ ಮಾಡಿದರು. ಸ್ವಚ್ಛ ಭಾರತ ಅಭಿಯಾನ ದೇಶದಲ್ಲಿ ನೈರ್ಮಲ್ಯ ವ್ಯಾಪ್ತಿಯ ಪ್ರಮಾಣವನ್ನು ಗಣನೀಯವಾಗಿ ಹೆಚ್ಚಿಸಿದೆ ಎಂದರು.

 

ಸಾಧ್ಯವಾದಷ್ಟು ಬೇಗ ದೇಶವು ತನ್ನ ನ್ಯೂನತೆಗಳಿಂದ ಹೊರಬರಬೇಕೆಂದು ಇಂದು ಜನರು ಬಯಸುತ್ತಾರೆ ಎಂದರು. ರಾಷ್ಟ್ರ ನಿರ್ಮಾಣದ ಉದ್ದೇಶಕ್ಕಾಗಿ ಸರ್ಕಾರ ಕಠಿಣವಾಗಿ ಶ್ರಮಿಸುತ್ತಿದೆ ಮತ್ತು ಈ ಪ್ರಯತ್ನಕ್ಕೆ ಪ್ರತಿಯೊಬ್ಬರ ಬೆಂಬಲ ವೇಗ ನೀಡುತ್ತದೆ ಎಂದರು. 

 

***