ಪಿಎಂಇಂಡಿಯಾ
ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ 150ನೇ ಜನ್ಮ ದಿನಾಚರಣೆಯ ಸ್ಮರಣಾರ್ಥ ಅಕ್ಟೋಬರ್ 31 ರಂದು ನಡೆಯುವ ಏಕತಾ ಓಟದಲ್ಲಿ ಭಾಗವಹಿಸುವಂತೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಇಂದು ದೇಶಾದ್ಯಂತ ನಾಗರಿಕರಿಗೆ ಕರೆ ನೀಡಿದ್ದಾರೆ. ಈ ಕಾರ್ಯಕ್ರಮವು ರಾಷ್ಟ್ರೀಯ ಏಕತಾ ದಿನವನ್ನು ಸೂಚಿಸುತ್ತದೆ. ಸರ್ದಾರ್ ವಲ್ಲಭಬಾಯಿ ಪಟೇಲ್ ಅವರು ಭಾರತಕ್ಕಾಗಿ ಕಲ್ಪಿಸಿಕೊಂಡ ಏಕತೆ ಮತ್ತು ಒಗ್ಗಟ್ಟಿನ ಶಾಶ್ವತ ಮನೋಭಾವವನ್ನು ಆಚರಿಸುವ ಸಂಕೇತವಾಗಿದೆ.
ಏಕತಾ ದಿವಸ್ ಭಾರತ್ದ ಎಕ್ಸ್ ಖಾತೆಯ ಪೋಸ್ಟ್ಗೆ ಶ್ರೀ ಮೋದಿ ಅವರು ಹೀಗೆ ಪ್ರತಿಕ್ರಿಯಿಸಿದ್ದಾರೆ:
“ಅಕ್ಟೋಬರ್ 31 ರಂದು ನಡೆಯುವ ಏಕತಾ ದಿನದ ಓಟದಲ್ಲಿ ಎಲ್ಲರೂ ಭಾಗವಹಿಸಿ ಒಗ್ಗಟ್ಟಿನ ಮನೋಭಾವವನ್ನು ಆಚರಿಸಿ! ಸರ್ದಾರ್ ಪಟೇಲ್ ಅವರ ಏಕತಾ ಭಾರತದ ದೃಷ್ಟಿಕೋನವನ್ನು ನಾವೆಲ್ಲರೂ ಗೌರವಿಸೋಣ.”
****
Join the Run for Unity on 31st October and celebrate the spirit of togetherness! Let’s honour Sardar Patel’s vision of a united India. https://t.co/KalRcynMIi
— Narendra Modi (@narendramodi) October 27, 2025