Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಸವಾಲುಗಳನ್ನು ಜಯಿಸುವ ಧೈರ್ಯ ಮತ್ತು ಇಚ್ಛಾಶಕ್ತಿಯನ್ನು ಉಲ್ಲೇಖಿಸುವ ಒಂದು ಸಂಸ್ಕೃತ ಸುಭಾಷಿತವನ್ನು ಹಂಚಿಕೊಂಡಿರುವ ಪ್ರಧಾನಮಂತ್ರಿ


ಜೀವನದ ಅತ್ಯಂತ ಕಠಿಣ ಅಡೆತಡೆಗಳನ್ನು ಜಯಿಸುವಲ್ಲಿ ಆತ್ಮ ವಿಶ್ವಾಸ ಮತ್ತು ಆಂತರಿಕ ಶಕ್ತಿಯ ಮಹತ್ವವನ್ನು ಉಲ್ಲೇಖಿಸುವ ಸಂಸ್ಕೃತ ಸುಭಾಷಿತವನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಇಂದು ಹಂಚಿಕೊಂಡಿದ್ದಾರೆ.

ಧೈರ್ಯ ಮತ್ತು ದೃಢಸಂಕಲ್ಪದ ವ್ಯಕ್ತಿಗೆ ಜೀವನದಲ್ಲಿ ಯಾವುದೂ ಅಸಾಧ್ಯವಲ್ಲ ಎಂದು ಪ್ರಧಾನಿಯವರು ಹೇಳಿದ್ದಾರೆ. ಇಚ್ಛಾಶಕ್ತಿ ಮತ್ತು ಆತ್ಮವಿಶ್ವಾಸದ ಬಲದಿಂದ ನಾವು ಅತ್ಯಂತ ಕಷ್ಟಕರವಾದ ಸವಾಲುಗಳನ್ನು ಕೂಡಾ ಜಯಿಸಬಹುದು ಎಂದು ಶ್ರೀ ಮೋದಿ ಹೇಳಿದ್ದಾರೆ.

ಪ್ರಧಾನಮಂತ್ರಿಯವರು Xನ ಪೋಸ್ಟ್ ನಲ್ಲಿ;

“जो व्यक्ति साहस और संकल्प से भरा हो, उसके लिए जीवन में कुछ भी असंभव नहीं। आत्मविश्वास और इच्छाशक्ति के बल पर हम कठिन से कठिन चुनौतियों को पार कर सकते हैं।

एकोऽपि सिंहः साहस्रं यूथं मथ्नाति दन्तिनाम् ।
तस्मात् सिंहमिवोदारमात्मानं वीक्ष्य सम्पतेत्॥”

ಒಂದು ಸಿಂಹವು ಸಾವಿರ ಆನೆಗಳನ್ನು ಸೋಲಿಸುವ ಶಕ್ತಿಯನ್ನು ಹೊಂದಿರುವಂತೆ, ಒಬ್ಬ ವ್ಯಕ್ತಿಯು ಸಿಂಹದಂತೆ ಧೈರ್ಯ, ಆತ್ಮವಿಶ್ವಾಸ ಮತ್ತು ಆತ್ಮ ಶಕ್ತಿಯಿಂದ ನಿರ್ಭಯವಾಗಿ ಉದಾತ್ತ ಕಾರ್ಯಗಳಲ್ಲಿ ತೊಡಗಬೇಕು.

 

*****