Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಸ್ವಾತಂತ್ರ್ಯ ಹೋರಾಟಗಾರರ ತ್ಯಾಗ ಮತ್ತು 2047ರ ವೇಳೆಗೆ ವಿಕಸಿತ ಭಾರತವನ್ನು ನಿರ್ಮಿಸುವ ಸಂಕಲ್ಪವನ್ನು ವಿವರಿಸುವ ಭಾರತದ ಉಪರಾಷ್ಟ್ರಪತಿ ಶ್ರೀ ಸಿ.ಪಿ. ರಾಧಾಕೃಷ್ಣನ್ ಅವರ ಲೇಖನ ಹಂಚಿಕೊಂಡಿರುವ ಪ್ರಧಾನಮಂತ್ರಿ


ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಭಾರತದ ಮಾನ್ಯ ಉಪರಾಷ್ಟ್ರಪತಿ ಶ್ರೀ ಸಿ ಪಿ ರಾಧಾಕೃಷ್ಣನ್ ಅವರು ಬರೆದಿರುವ ಲೇಖನವನ್ನು ಹಂಚಿಕೊಂಡಿದ್ದಾರೆ.

ಭಾರತವು ತನ್ನ 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸುತ್ತಿರುವ ಸಂದರ್ಭದಲ್ಲಿ ಈ ಲೇಖನವು ದೇಶಾದ್ಯಂತದ ಸ್ವಾತಂತ್ರ್ಯ ಹೋರಾಟಗಾರರ ತ್ಯಾಗ ಸ್ಮರಿಸುತ್ತಿದೆ ಮತ್ತು ಮಾನ್ಯ ಉಪರಾಷ್ಟ್ರಪತಿಯವರ ಅಂಡಮಾನ್ ಮತ್ತು ನಿಕೋಬಾರ್ ದ್ವೀಪ ಭೇಟಿಯನ್ನು ನೆನಪಿಸಿದೆ ಎಂದು ಪ್ರಧಾನಮಂತ್ರಿ ಹೇಳಿದ್ದಾರೆ. ಈ ಅಮೃತ ಕಾಲದಲ್ಲಿ 2047 ರ ವೇಳೆಗೆ ವಿಕಸಿತ ಭಾರತವನ್ನು ನಿರ್ಮಿಸಲು ಜನರು ತಮ್ಮನ್ನು ತಾವು ಸಮರ್ಪಿಸಿಕೊಳ್ಳಬೇಕು ಹಾಗೂ ರಾಷ್ಟ್ರದ ಪ್ರಗತಿ ಮತ್ತು ಸಮೃದ್ಧಿಗಾಗಿ ಒಟ್ಟಾಗಿ ಕಾರ್ಯನಿರ್ವಹಿಸಬೇಕೆಂದು ಲೇಖನ ಕರೆ ನೀಡಿದೆ ಎಂದು ಅವರು ಹೇಳಿದ್ದಾರೆ.

ಪ್ರಧಾನಮಂತ್ರಿಗಳ ಎಕ್ಸ್ ಪೋಸ್ಟ್ ಹೀಗಿದೆ:

“ಭಾರತ ತನ್ನ 80ನೇ ಸ್ವಾತಂತ್ರ್ಯ ದಿನವನ್ನು ಆಚರಿಸುತ್ತಿರುವ ಈ ಸಂದರ್ಭದಲ್ಲಿ, ಮಾನ್ಯ @VPIndia ಶ್ರೀ @CPR_VP ಅವರು ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳಿಗೆ ತಮ್ಮ ಭೇಟಿಯನ್ನು ನೆನಪು ಮಾಡಿಕೊಳ್ಳುತ್ತಾ, ದೇಶಾದ್ಯಂತದ ಸ್ವಾತಂತ್ರ್ಯ ಹೋರಾಟಗಾರರ ತ್ಯಾಗ ಸ್ಮರಿಸಿದ್ದಾರೆ.

ಈ ಅಮೃತ ಕಾಲದಲ್ಲಿ 2047ರ ವೇಳೆಗೆ ವಿಕಸಿತ ಭಾರತವನ್ನು ನಿರ್ಮಿಸಲು ಜನರು ತಮ್ಮನ್ನು ತಾವು ಸಮರ್ಪಿಸಿಕೊಳ್ಳಬೇಕೆಂದು ಹಾಗೂ ರಾಷ್ಟ್ರದ ಪ್ರಗತಿ ಮತ್ತು ಸಮೃದ್ಧಿಗಾಗಿ ಒಟ್ಟಾಗಿ ಕಾರ್ಯನಿರ್ವಹಿಸಬೇಕೆಂದು ಅವರು ಕರೆ ನೀಡಿದ್ದಾರೆ.”

 

*****