Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

​​​​​​​ಸ್ವಾಮಿ ಸ್ಮರಣಾನಂದಜಿ ಮಹಾರಾಜ್ ಅವರ ಆರೋಗ್ಯ ವಿಚಾರಿಸಲು ಆಸ್ಪತ್ರೆಗೆ ಭೇಟಿ ನೀಡಿದ ಪ್ರಧಾನ ಮಂತ್ರಿಗಳು

​​​​​​​ಸ್ವಾಮಿ ಸ್ಮರಣಾನಂದಜಿ ಮಹಾರಾಜ್ ಅವರ ಆರೋಗ್ಯ ವಿಚಾರಿಸಲು ಆಸ್ಪತ್ರೆಗೆ ಭೇಟಿ ನೀಡಿದ ಪ್ರಧಾನ ಮಂತ್ರಿಗಳು


ರಾಮಕೃಷ್ಣ ಮಠ ಮತ್ತು ರಾಮಕೃಷ್ಣ ಮಿಷನ್ ಅಧ್ಯಕ್ಷ ಶ್ರೀಮದ್‌ ಸ್ವಾಮಿ ಸ್ಮರಣಾನಂದಜಿ ಮಹಾರಾಜ್ ಅವರ ಆರೋಗ್ಯ ವಿಚಾರಿಸಲು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಕೋಲ್ಕತ್ತಾದ ಆಸ್ಪತ್ರೆಗೆ ಭೇಟಿ ನೀಡಿದ್ದರು.

ಈ ಬಗ್ಗೆ “ಎಕ್ಸ್‌”ನಲ್ಲಿ ಸಂದೇಶ ಪೋಸ್ಟ್‌ ಮಾಡಿರುವ ಪ್ರಧಾನ ಮಂತ್ರಿಗಳು,

“ಕೋಲ್ಕತ್ತಾ ತಲುಪುತ್ತಿದ್ದಂತೆ ಆಸ್ಪತ್ರೆಗೆ ತೆರಳಿ ರಾಮಕೃಷ್ಣ ಮಠ ಮತ್ತು ರಾಮಕೃಷ್ಣ ಮಿಷನ್ ಅಧ್ಯಕ್ಷ ಶ್ರೀಮದ್ ಸ್ವಾಮಿ ಸ್ಮರಣಾನಂದಜಿ ಮಹಾರಾಜ್ ಅವರ ಆರೋಗ್ಯ ಕ್ಷೇಮ ವಿಚಾರಿಸಿದ್ದೇನೆ. ಅವರು ಉತ್ತಮ ಆರೋಗ್ಯ ಹೊಂದಲಿ ಹಾಗೂ ಶೀಘ್ರ ಗುಣಮುಖರಾಗಲಿ ಎಂದು ನಾವೆಲ್ಲರೂ ಪ್ರಾರ್ಥಿಸುತ್ತಿದ್ದೇವೆ” ಎಂದು ಹೇಳಿದ್ದಾರೆ.

***